ಕಾಸರಗೋಡು: ಜೂ.25ರಂದು ಯಕ್ಷಗಾನ ಭಾಗವತಿಕೆ ಶಿಬಿರ

Update: 2023-06-23 18:09 GMT

ಕಾಸರಗೋಡು, ಜೂ.23: ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಜೂ.25ರಂದು ತೆಂಕತಿಟ್ಟು ಯಕ್ಷಗಾನ ಭಾಗವತಿಕೆ ಶಿಬಿರ ಆಯೋಜಿಸಲಾಗಿದೆ.

ಕಾಸರಗೋಡಿನ ಸಿರಿಬಾಗಿಲು ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ಬೆಳಗ್ಗೆ 9ಕ್ಕೆ ಆರಂಭಗೊಳ್ಳುವ ಶಿಬಿರವನ್ನು ಹಿಮ್ಮೇಳ ಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಉದ್ಘಾಟಿಸುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News