ತಾರಸಿನಿಂದ ಬಿದ್ದ ಗಾಯಾಳು ಮೃತ್ಯು

Update: 2023-07-05 15:52 GMT

ಕೊಲ್ಲೂರು, ಜು.5: ಮನೆಯ ತಾರಸಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜಡ್ಕಲ್ ಗ್ರಾಮದ ಹಾಲ್ಕಲ್ ಎಂಬಲ್ಲಿ ನಡೆದಿದೆ.

ಮೃತರನ್ನು ಶೇಖರ(32) ಎಂದು ಗುರುತಿಸಲಾಗಿದೆ. ಇವರು ಜೂ.30ರಂದು ಹಾಲ್ಕಲ್ ನಿವಾಸಿ ವಕ್ಕಚ್ಚನ್ ಎಂಬವರ ಮನೆಯ ತಾರಸಿನಲ್ಲಿ ನೆಟ್(ಮೇಸ್) ಅಳವಡಿಸುವ ಕೆಲಸ ಮಾಡುತ್ತಿದ್ದು, ಈ ವೇಳೆ ಆಕಸ್ಮಿಕವಾಗಿ ಆಯ ತಪ್ಪಿ ಕೆಳಗೆ ಬಿದ್ದಿದ್ದರೆನ್ನಲಾಗಿದೆ.

ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಜು.4ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News