ಉಪ್ಪಿನಂಗಡಿ: ರಸ್ತೆ ಅಪಘಾತ; ದ್ವಿಚಕ್ರ ಸವಾರರಿಗೆ ಗಾಯ

Update: 2023-07-08 17:10 GMT

ಉಪ್ಪಿನಂಗಡಿ: ಇಲ್ಲಿನ ಪೆರಿಯಡ್ಕ ಎಂಬಲ್ಲಿ ಸ್ಕೂಟಿಯೊಂದಕ್ಕೆ ಅಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟಿಯಲ್ಲಿದ್ದ ತಾಯಿ ಹಾಗೂ ಮಕ್ಕಳಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಜು.8ರಂದು ಸಂಜೆ ಸಂಭವಿಸಿದೆ.

ಗಾಯಾಳುಗಳನ್ನು ಪೆರಿಯಡ್ಕದ ಶೇಖರ್ ಗೌಡ ಎಂಬವರ ಪತ್ನಿ ಧಮಯಂತಿ (39), ಮಕ್ಕಳಾದ ಮನಿಷಾ (14), ಸನಿತಾ (11) ಎಂದು ಗುರುತಿಸಲಾಗಿದೆ.

ಘಟನೆ ಸಂಭವಿಸಿದಾಕ್ಷಣ ಉಪ್ಪಿನಂಗಡಿಯ 108 ಅಂಬುಲೆನ್ಸ್ ನ ಸಿಬ್ಬಂದಿಗಳಾದ ಅವಿನಾಶ್ ಹೆಚ್ ಎಂ, ಚಾಲಕ ಶೈಲಾನಿ ಶೇಖ್ ಘಟನಾ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲು ನೆರವಾದರು. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News