ಕಾಸರಗೋಡು: ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಅವಳಿ ಮಕ್ಕಳಿಬ್ಬರು ಮೃತ್ಯು

Update: 2024-06-17 17:02 GMT

ಕಾಸರಗೋಡು: ಅವಳಿ ಮಕ್ಕಳಿಬ್ಬರು ಕಲ್ಲಿನ ಕ್ವಾರಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಸಂಜೆ ಚೀಮೇನಿ ಕನಿಯಾಂದಲದಲ್ಲಿ ನಡೆದಿದೆ.

ಚೀಮೇನಿ ಕನಿಯಾಂದಲದಲ್ಲಿ ರಾಧಾಕೃಷ್ಣ ರವರ ಮಕ್ಕಳಾದ ಸುದೇವ್ ( 10) ಮತ್ತು ಶ್ರೀದೇವಿ ( 10) ಮೃತಪಟ್ಟವರು.

ಚೀಮೇನಿ ಸರಕಾರಿ ಪ್ರಾಥಮಿಕ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿಗಳಾಗಿದ್ದರು. 

ಮಧ್ಯಾಹ್ನ ಇಬ್ಬರೂ ಸೈಕಲ್ ನಲ್ಲಿ ಆಟವಾಡಲು ತೆರಳಿದ್ದು, ತಡವಾದರೂ ಆಗಮಿಸದ ಹಿನ್ನಲೆಯಲ್ಲಿ ಮನೆಯವರು ಹುಡುಕಾಟ ನಡೆಸಿದಾಗ ಕ್ವಾರಿಯ ಸಮೀಪ ಸೈಕಲ್ ಪತ್ತೆಯಾಗಿದೆ. ಸಂಶಯಗೊಂಡು ಮನೆಯವರು ಹಾಗೂ ಸ್ಥಳೀಯರು ಶೋಧ ನಡೆಸಿದಾಗ ಮಕ್ಕಳು ಕ್ವಾರಿಗೆ ಬಿದ್ದಿರುವುದು ಕಂಡುಬಂದಿದೆ.

ಇಬ್ಬರನ್ನು ಮೇಲಕ್ಕೆತ್ತಿ ಸಮೀಪದ ಆಸ್ಪತ್ರೆಗೆ ದಾಖಲಿಸಿದರು. ಆದರೆ ಅದಾಗಲೇ ಇಬ್ಬರೂ ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಮೃತದೇಹವನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News