ಕಾಸರಗೋಡು: ರೈಲಿಗೆ ಕಲ್ಲೆಸೆದ ಆರೋಪಿಯ ಬಂಧನ

Update: 2025-03-31 18:53 IST
ಕಾಸರಗೋಡು:  ರೈಲಿಗೆ ಕಲ್ಲೆಸೆದ ಆರೋಪಿಯ ಬಂಧನ
  • whatsapp icon

ಕಾಸರಗೋಡು: ರೈಲಿಗೆ ಕಲ್ಲೆಸೆದ ಆರೋಪಿಯನ್ನು ಗಂಟೆಗಳ ಅವಧಿಯಲ್ಲಿ ರೈಲ್ವೆ ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.

ತೆಕ್ಕಿಲ್ ಮೈಲಾಟಿ ಯ ಎಸ್ .ಅನಿಲ್ ಕುಮಾರ್ (41) ಬಂಧಿತ ಆರೋಪಿ. ಆದಿತ್ಯವಾರ ರಾತ್ರಿ ಬೇಕಲ ರೈಲ್ವೆ ನಿಲ್ದಾಣದಲ್ಲಿ ಘಟನೆ ನಡೆದಿದೆ.

ಮಂಗಳೂರಿನಿಂದ ತಿರುವನಂತಪುರಕ್ಕೆ ತೆರಳುತ್ತಿದ್ದ ಮಲಬಾರ್ ಎಕ್ಸ್ ಪ್ರೆಸ್ ರೈಲಿಗೆ ಈತ ಕಲ್ಲೆಸೆದಿದ್ದನು. ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಈತ ಇದೇ ರೈಲಿನಲ್ಲಿದ್ದ ಯುವತಿಗೆ ಕಿರುಕುಳ ನೀಡಲೆತ್ನಿಸಿದ್ದು, ಇದನ್ನು ಯುವತಿ ಜೊತೆ ಇದ್ದ ಯುವಕ ಪ್ರಶ್ನಿಸಿದ್ದಾನೆ. ಈ ಸಂದರ್ಭ ದಲ್ಲಿ ಈತ ಹಲ್ಲೆಗೆ ಮುಂದಾಗಿದ್ದಾನೆ. ಆರೋಪಿ ಪಾನಮತ್ತನಾಗಿದ್ದನು ಎನ್ನಲಾಗಿದೆ. ಬೇಕಲ ರೈಲ್ವೆ ನಿಲ್ದಾಣದಲ್ಲಿ ಇಳಿದ ಈತ ಮತ್ತೆ ದಾಂಧಲೆಗೆ ಮುಂದಾಗಿದ್ದು, ರೈಲಿಗೆ ಕಲ್ಲೆಸೆದಿದ್ದನು.

ಈ ಬಗ್ಗೆ ತನಿಖೆ ನಡೆಸಿದ ರೈಲ್ವೆ ಪೊಲೀಸರು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ನಡೆಸಿದ ತನಿಖೆಯಿಂದ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News