ಅಡೂರು: ಪಾಳುಬಾವಿಯಲ್ಲಿ ಚಿರತೆಯ ಮೃತದೇಹ ಪತ್ತೆ
Update: 2025-02-01 15:44 IST

ಕಾಸರಗೋಡು: ಅಡೂರು ತಲ್ಪಚ್ಚೇರಿ ಸಮೀಪದ ಖಾಸಗಿ ವ್ಯಕ್ತಿಯ ಹಿತ್ತಿಲಿನಲ್ಲಿರುವ ಪಾಳುಬಾವಿಯಲ್ಲಿ ಚಿರತೆಯು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪಾಳುಬಾವಿಯಲ್ಲಿ ಚಿರತೆ ಪತ್ತೆಯಾಗಿದ್ದು,
ಪರಿಸರದಲ್ಲಿ ದುರ್ವಾಸನೆ ಕಂಡುಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಗಮನಿಸಿದಾಗ ಪಾಳುಬಾವಿಯಲ್ಲಿ ಚಿರತೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.