ಕಾಸರಗೋಡು: ಪೊಲೀಸರ ಮೇಲೆ ಹಲ್ಲೆ ಪ್ರಕರಣ; ಆರೋಪಿಯ ಬಂಧನ

Update: 2023-09-05 06:46 GMT

ಕಾಸರಗೋಡು : ಪೊಲೀಸರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ ನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಯೂತ್ ಲೀಗ್ ಜಿಲ್ಲಾ ಕಾರ್ಯದರ್ಶಿ, ಉಪ್ಪಳ ಹಿದಾಯತ್ ಬಜಾರ್ ನ ಗೋಲ್ಡನ್ ಅಬ್ದುಲ್ ರಹಮಾನ್ (34) ಎಂದು ಗುರುತಿಸಲಾಗಿದೆ. ಅಬ್ದುಲ್ ರಹಮಾನ್ ಅವರ ಮನೆಯಿಂದಲೇ ಸೋಮವಾರ ಸಂಜೆ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಆದಿತ್ಯವಾರ ರಾತ್ರಿ ಉಪ್ಪಳ ಹಿದಾಯತ್ ನಗರದಲ್ಲಿ ಘಟನೆ ನಡೆದಿತ್ತು . ರಾತ್ರಿ ಗಸ್ತು ತಿರುಗುತ್ತಿದ್ದ ವೇಳೆ ಜನರು ಗುಂಪುಗೂಡಿರುವುದನ್ನು ಕಂಡು ಸ್ಥಳಕ್ಕೆ ತೆರಳಿದ್ದ ಪೊಲೀಸರ ಮೇಲೆ ಗುಂಪೊಂದು ಹಲ್ಲೆ ನಡೆಸಿತ್ತು.

ಹಲ್ಲೆಯಿಂದ ಸಬ್ ಇನ್ಸ್ ಪೆಕ್ಟರ್ ಪಿ.ಅನೂಪ್ ಸೇರಿದಂತೆ ಇಬ್ಬರು ಪೊಲೀಸರು ಗಾಯ ಗೊಂಡಿದ್ದರು. ಹಲ್ಲೆ ಗೈದ ತಂಡ ದಲ್ಲಿ ಅಬ್ದುಲ್ ರಹಮಾನ್ ಕೂಡಾ ಇದ್ದರು ಎಂದು ಆರೋಪಿಸಿ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ರಶೀದ್, ಅಫ್ಜಲ್ ಸೇರಿದಂತೆ ಇಬ್ಬರನ್ನು ಸೋಮವಾರ ಬಂಧಿಸಲಾಗಿತ್ತು. ಇನ್ನಿಬ್ಬರು ತಲೆ ಮರೆಸಿ ಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News