ಕಾಸರಗೋಡು | ಬಾವಿಗೆ ಬಿದ್ದು 3 ವರ್ಷದ ಮಗು ಮೃತ್ಯು

Update: 2024-09-30 04:50 GMT

ಸಾಂದರ್ಭಿಕ ಚಿತ್ರ

ಕಾಸರಗೋಡು: ಕೆರೆಗೆ ಬಿದ್ದು ಮೂರು ವರ್ಷದ ಮಗುವೊಂದು ಮೃತಪಟ್ಟ ದಾರುಣ ಘಟನೆ ಬೆದ್ರಡ್ಕ ಕಂಬಾರ್ ಎಂಬಲ್ಲಿ ರವಿವಾರ ಸಂಜೆ ನಡೆದಿದೆ.

ಕಂಬಾರು ನಿವಾಸಿ ನೌಶಾದ್ ಎಂಬವರ ಪುತ್ರ ಮುಹಮ್ಮದ್ ಸೌಹಾನ್ ಹಬೀಬ್ ಮೃತಪಟ್ಟ ಮಗು.

ಸಂಜೆ ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ದಿಢೀರ್ ನಾಪತ್ತೆಯಾಗಿತ್ತು. ತೀವ್ರ ಹುಡುಕಾಟದ ಬಳಿಕ ಮನೆ ಸಮೀಪದ 200 ಮೀಟರ್ ದೂರದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಮಗು ಪತ್ತೆಯಾಗಿದೆ.

ಕೃಷಿಕರಾದ ನೌಶಾದ್ ಅವರ ಏಕೈಕ ಪುತ್ರನಾಗಿದ್ದ ಹಬೀಬ್.

ಈ ಬಗ್ಗೆ ಕಾಸರಗೋಡು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News