ಕಾಸರಗೋಡು: ಬೈಕ್ - ಕಾರು ನಡುವೆ ಅಪಘಾತ; ಯುವಕ ಮೃತ್ಯು

Update: 2024-08-22 16:26 GMT

ಕಾಸರಗೋಡು : ಬೈಕ್ ಮತ್ತು ಕಾರು ನಡುವೆ ಉಂಟಾದ ಅಪಘಾತದಲ್ಲಿ ಯುವಕನೋರ್ವ ಮೃತಪಟ್ಟ ಘಟನೆ ಗುರುವಾರ ಸಂಜೆ ಚೆರ್ಕಳ ಕೆ.ಕೆ ಪುರದಲ್ಲಿ ನಡೆದಿದೆ.

ಕುಂಬಳೆ ಮೊಗ್ರಾಲ್ ಖುತುಬಿ ನಗರದ ಅಹಮ್ಮದ್ ಕಬೀರ್ (30) ಮೃತಪಟ್ಟವರು. ಸಂಬಂಧಿಕರೊಬ್ಬರ ವಿವಾಹ ಆಮಂತ್ರಣಕ್ಕೆ ತೆರಳಿ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಗಂಭೀರ ಗಾಯಗೊಂಡ ಕಬೀರ್ ರನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಗಳೂರಿನ ಆಸ್ಪತ್ರೆಗೆ ತಲಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

ವಿದ್ಯಾನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News