ಕಾಸರಗೋಡು : ಬಾವಿಗೆ ಬಿದ್ದು ಬಾಲಕ ಮೃತ್ಯು

Update: 2023-10-02 17:22 GMT

ಸಾಂದರ್ಭಿಕ ಚಿತ್ರ

ಕಾಸರಗೋಡು : ಎಂಟು ವರ್ಷದ ಬಾಲಕ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಕಲ ಸಮೀಪದ ಕುನಿಯದಲ್ಲಿ ಸೋಮವಾರ ಸಂಜೆ ನಡೆದಿದೆ.

ಕುನಿಯ ಹದ್ದಾದ್ ನಗರದ ಅಬ್ದುಲ್ ರಹ್ಮಾನ್ ಬಾಖವಿ ಎಂಬವರ ಪುತ್ರ ಆಶಿಕ್ (8) ಮೃತಪಟ್ಟ ಬಾಲಕ.

ಮನೆಯ ಸಮೀಪದ ಬಾವಿಯೊಂದರಲ್ಲಿ ಮೃತದೇಹ ಪತ್ತೆಯಾಗಿದೆ. ಬಾಲಕ ನಾಪತ್ತೆಯಾದ ಹಿನ್ನೆಲೆಯಲ್ಲಿ ಶೋಧ ನಡೆಸಿದಾಗ ಬಾವಿಗೆ ಬಿದ್ದಿರುವುದು ಕಂಡು ಬಂದಿದ್ದು, ಪರಿಸರ ವಾಸಿಗಳು ಮೇಲಕ್ಕೆತ್ತಿ ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News