ಕಾಸರಗೋಡು: ಕೆರೆಯಲ್ಲಿ ಮುಳುಗಿ ಸಹೋದರರಿಬ್ಬರು ಮೃತ್ಯು

Update: 2023-07-01 08:52 GMT
ಮೃತ ಸಹೋದರರು

ಕಾಸರಗೋಡು: ಕೆರೆಯಲ್ಲಿ ಸ್ನಾನಕ್ಕಿಳಿದ ಒಂದೇ ಕುಟುಂಬದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಮೊಗ್ರಾಲ್ ಕೊಪ್ಪಳ ಎಂಬಲ್ಲಿ ಶನಿವಾರ ಮಧ್ಯಾಹ್ನ ವರದಿಯಾಗಿದೆ.

ಮೃತರನ್ನು ಮಂಜೇಶ್ವರ ಮಜಿ ಬೈಲ್ ನ ಖಾದರ್ ರವರ ಮಕ್ಕಳಾದ ನಾಝಿಮ್ (22) ಮತ್ತು ನಾದಿಲ್ (17) ಎಂದು ಗುರುತಿಸಲಾಗಿದೆ.

ಸ್ಥಳೀಯರು ಇಬ್ಬರನ್ನು ಮೇಲಕ್ಕೆತ್ತಿ ಅಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಳಿಲ್ಲ ಎಂದು ಹೇಳಲಾಗಿದೆ.

ಈ ಸಂಬಂಧ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಮೃತ ದೇಹವನ್ನು ಮಂಗಲ್ಪಾಡಿ ಯಲ್ಲಿರುವ ತಾಲೂಕು ಆಸ್ಪತ್ರೆಯ ಶವಾಗಾರ ದಲ್ಲಿರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News