ಕಾಸರಗೋಡು: ನದಿಗೆ ಹಾರಿ ವ್ಯಾಪಾರಿ ಆತ್ಮಹತ್ಯೆ

Update: 2023-11-25 08:57 GMT

ಕಾಸರಗೋಡು: ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೈದಿದ್ದ ನಗರದ ವ್ಯಾಪಾರಿಯೋರ್ವರ ಮೃತದೇಹ ಶನಿವಾರ ಬೆಳಿಗ್ಗೆ ಪತ್ತೆಯಾಗಿದೆ.

ಮೃತ ವ್ಯಕ್ತಿಯನ್ನು ಉಳಿಯತ್ತಡ್ಕ ಶಿರಿಬಾಗಿಲಿನ ಹಸೈನಾರ್ (46) ಎಂದು ಗುರುತಿಸಲಾಗಿದೆ. ತನ್ನ ಜೀವನ ಕೊನೆಗೊಳಿಸುವುದಾಗಿ ಕುಟುಂಬದ ವಾಟ್ಸಪ್ ಗ್ರೂಪ್ ನಲ್ಲಿ‌ ಹಸೈನಾರ್ ಶುಕ್ರವಾರ ಮುಂಜಾನೆ ಸಂದೇಶ ಕಳುಹಿಸಿದ್ದರು ಎಂದು ತಿಳಿದು ಬಂದಿದೆ.

ಚಂದ್ರ ಗಿರಿ ಸೇತುವೆಯಲ್ಲಿ ಕಾರು ನಿಲ್ಲಿಸಿ ನದಿಗೆ ಹಾರಿದ್ದನ್ನು‌ ಗಮನಿಸಿದ ಪ್ರತ್ಯಕ್ಷ ದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು , ನಾಗರಿಕರು ಶೋಧ ನಡೆಸಿದ್ದು, ಇಂದು ಬೆಳಿಗ್ಗೆ ಮೃತ ದೇಹ ಪತ್ತಯಾಗಿದೆ.

ಆರ್ಥಿಕ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News