ಕಾಸರಗೋಡು: ಕಾರು- ಸ್ಕೂಟರ್‌ ಢಿಕ್ಕಿ; ಇಬ್ಬರು ಮೃತ್ಯು, ಹಲವರಿಗೆ ಗಾಯ

Update: 2024-01-09 09:53 GMT

ಕಾಸರಗೋಡು : ಕಾರು ಮತ್ತು ಸ್ಕೂಟರ್ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಆರು ಮಂದಿ ಗಾಯಗೊಂಡ ಘಟನೆ ಕಾಞಂಗಾಡ್‌ ನ ಹೊಸದುರ್ಗ ಸಮೀಪದ ಪೆರಿಯ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೃತರನ್ನು ಸ್ಕೂಟರ್ ಸವಾರರಾದ ಚಟ್ಟಂಚಾಲ್ ನ ಗೋಪಾಲ ಕೃಷ್ಣ (55) ಮತ್ತು ಪರವನಡ್ಕದ ನಾರಾಯಣನ್ (62) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಬದಿಯಡ್ಕದ ಶಾಹೀನ್( 36), ಪತ್ನಿ ಸಹಲಾ, ಸಂಬಧಿಕರಾದ ಸಹೀನ್, ಶಮ್ನಾಸ್, ಫಾತಿಮಾ, ಹನಾ ಫಾತಿಮಾ ಗಾಯಗೊಂಡಿದ್ದು, ಕೂಡಲೇ ಸ್ಥಳೀಯರು ಗಾಯಾಳುಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಾಸ್ ಪೋರ್ಟ್ ಗೆ ಸಂಬಂಧಿಸಿದ ಕೆಲಸದ ನಿಮಿತ್ತ ಬದಿಯಡ್ಕ ನಿವಾಸಿಗಳು ಪಯ್ಯನ್ನೂರಿಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡ ಪಾದಚಾರಿ ಹಂಝ (65) ಎಂಬವರನ್ನು ಕಾಸರಗೋಡಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ರಭಸಕ್ಕೆ ಸ್ಕೂಟರ್ ಸಂಪೂರ್ಣ ನಜ್ಜಗುಜ್ಜಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಹೆದ್ದಾರಿ ಕಾಮಗಾರಿಗಾಗಿ ತೋಡಲಾಗಿದ್ದ ಹೊಂಡಕ್ಕೆ ಬಿದ್ದಿದೆ

ಮೃತ ದೇಹಗಳನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಗಾರದಲ್ಲಿರಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News