ಕಾಸರಗೋಡು: ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2024-09-15 07:33 GMT

ಕಾಸರಗೋಡು : ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಮಂಗಳೂರಿನ ಅತ್ತಾವರ ಕೆ.ಎಂ.ಸಿ.ಆಸ್ಪತ್ರೆಯ ಸಹಯೋಗದೊಂದಿಗೆ ಶನಿವಾರ ಸಿರಿಬಾಗಿಲಿನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ವೈದ್ಯಕೀಯ ಶಿಬಿರವನ್ನು ಕಾಸರಗೋಡಿನ ಹಿರಿಯ ವೈದ್ಯ ಡಾ. ಬಿ. ಎಸ್. ರಾವ್ ಅವರು ಉದ್ಘಾಟಿಸಿದರು. ಗ್ರಾಮೀಣ ಪ್ರದೇಶದಲ್ಲಿ ಈ ರೀತಿಯ ಶಿಬಿರಗಳಿಂದ ಬಡವರಿಗೆ ಉಪಯೋಗವಾಗವಾಗುತ್ತದೆ. ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು, ಸಿರಿಬಾಗಿಲು ಪ್ರತಿಷ್ಠಾನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಇಂತಹ ಚಟುವಟಿಕೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಕೆ.ಎಂ.ಸಿ.ಆಸ್ಪತ್ರೆಯ ಕ್ಯಾನ್ಸರ್ ತಜ್ಞ ಡಾ.ಅರವಿಂದ ಎನ್. ಅವರು ಕ್ಯಾನ್ಸರ್ ಕಾಯಿಲೆ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು. ಮದ್ಯಪಾನ, ಗುಟ್ಕ ಸೇವನೆ, ಸಿಗರೇಟ್ ಸೇವನೆ ಇತ್ಯಾದಿ ದುಶ್ಚಟಗಳಿಂದ ಎಲ್ಲರೂ ಮುಕ್ತರಾಗಬೇಕು. ಕ್ಯಾನ್ಸರ್ಗೆ ಯಾರು ಭಯಭೀತರಾಗಬೇಕಾಗಿಲ್ಲ. ಕ್ಯಾನ್ಸರ್ ಬಂದರೆ ಹೇಗೆ ಗುಣಪಡಿಸಬಹುದು? ಯಾವ ರೀತಿ ಜಾಗೃತಿ ವಹಿಸಬೇಕು? ಇತ್ಯಾದಿ ವಿಚಾರಗಳನ್ನು ಅವರು ತೆರೆದಿಟ್ಟರು. ಸಿರಿಬಾಗಿಲು ಪ್ರತಿಷ್ಠಾನ ಇಂತಹ ಚಟುವಟಿಕೆ ನಡೆಸುತ್ತಿರುವುದು ತಂಬಾ ಸಂತಸ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ವಾಸುದೇವ ಕಾರಂತ ಉಜಿರೆಕೆರೆ, ಇ. ಕೆ. ನಾಯಿನಾರ್ ಹಾಸ್ಪಿಟಲ್ ನ ಎಲುಬು ತಜ್ಞರಾದ ಡಾ. ಹರಿ ಕಿರಣ ಬಂಗೇರ ಹಾಜರಿದ್ದರು. ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಅತಿಥಿಗಳನ್ನು ಸ್ವಾಗತಿಸಿದರು. ಜಗದೀಶ ಕೆ. ಕೂಡ್ಲು ನಿರೂಪಿಸಿ, ಚಂದ್ರಕಲಾ ನೀರಾಳ ವಂದಿಸಿದರು.

ಉದಯ ಭಟ್ ನೇತೃತ್ವದಲ್ಲಿ ಶಿಬಿರ ನಡೆಯಿತು. 150ಕ್ಕೂ ಹೆಚ್ಚು ಜನರು ಶಿಬಿರದಲ್ಲಿ ಭಾಗವಹಿದರು. ಪ್ರತಿಷ್ಠಾನದ ಟ್ರಸ್ಟಿ ಸುಮಿತ್ರಾ ಮಯ್ಯ, ಮುಖ ಮಯ್ಯ, ರಾಜ್ ಮಯ್ಯ, ಶಿವ ನಾರಾಯಣ ವಾಟ್ಸಾಪ್ ಬಳಗದ ಸದಸ್ಯರು ಸಹಕರಿಸಿದರು. ಊರಿನ ಪ್ರಮುಖರು ಭಾಗವಹಿಸಿದರು.

Delete Edit

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News