ಕುಂಬಳೆ | ಎಂಟು ಅಕ್ರಮ ಮರಳುಗಾರಿಕೆ ಅಡ್ಡೆಗೆ ಪೊಲೀಸ್ ದಾಳಿ: ಆರು ದೋಣಿಗಳ ಧ್ವಂಸ

Update: 2023-09-12 05:03 GMT

ಕಾಸರಗೋಡು, ಸೆ.12: ಅಕ್ರಮ ಮರಳುಗಾರಿಕೆ ವಿರುದ್ಧ ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು, ಕುಂಬಳೆ ಶಿರಿಯ ಹೊಳೆಬದಿಯ ಎಂಟು ಅಕ್ರಮ ಮರಳುಗಾರಿಕೆ ಅಡ್ಡೆಗಳಿಗೆ ದಾಳಿ ನಡೆಸಿದ್ದಾರೆ.

ಈ ವೇಳೆ ಮರಳುಗಾರಿಕೆಗೆ ಬಳಸುತ್ತಿದ್ದ ಆರು ದೋಣಿಗಳನ್ನು ಧ್ವಂಸಗೊಳಿಸಿರುವ ಪೊಲೀಸರು. ಜೆಸಿಬಿ ಯಂತ್ರ ಬಳಸಿ ಮರಳುಗಾರಿಕಾ ಕೇಂದ್ರಗಳನ್ನು ನಾಶಗೊಳಿಸಿದ್ದಾರೆ.

ಅಕ್ರಮ ಮರಳುಗಾರಿಕೆ ಬಗ್ಗೆ ಲಭಿಸಿದ ದೂರಿನಂತೆ ಕಾಸರಗೋಡು ಡಿವೈಎಸ್ಪಿ ಪಿ.ಕೆ.ಸುಧಾಕರನ್ ನೇತೃತ್ವದಲ್ಲಿ ಕುಂಬಳೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ ಸಮಯಗಳಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News