ಮಂಜೇಶ್ವರ | ಮನೆ ಟೆರೇಸ್ ಮೇಲೆ ಬಿದ್ದಿದ್ದ ತೆಂಗಿನ ಗರಿ ತೆಗೆಯುವ ವೇಳೆ ವಿದ್ಯುತ್ ಆಘಾತ: ಯುವಕ ಮೃತ್ಯು

Update: 2024-08-20 04:04 GMT

ಕಾಸರಗೋಡು, ಆ.20: ವಿದ್ಯುತ್ ಆಘಾತಕ್ಕೆ ಒಳಗಾಗಿ ಯುವಕನೋರ್ವ ಮೃತಪಟ್ಟ ಘಟನೆ ಮಂಜೇಶ್ವರದ ಹೊಸ ಬೆಟ್ಟು ಎಂಬಲ್ಲಿ ಸೋಮವಾರ ಸಂಜೆ ಸಂಭವಿಸಿದೆ.

ಮೃತರನ್ನು ಯಶವಂತ(21) ಎಂದು ಗುರುತಿಸಲಾಗಿದೆ.

ಸೋಮವಾರ ಸಂಜೆ ಮನೆಯ ಟೆರೇಸ್ ನಲ್ಲಿ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ತೆರಳಿದ್ದರು. ಈ ವೇಳೆ ತೆಂಗಿನ ಗರಿ ಅಲ್ಲೇ ಹತ್ತಿರದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಿದ್ಯುತ್ ತಂತಿಗೆ ತಗುಲಿದೆ. ಇದರಿಂದ ವಿದ್ಯುತ್ ಆಘಾತಕ್ಕೆ ಒಳಗಾದ ಯಶವಂತ ಅಲ್ಲೇ ಕುಸಿದು ಮೃತಪಟ್ಟಿದ್ದಾರೆನ್ನಲಾಗಿದೆ.

ತುಂಬಾ ಹೊತ್ತು ಕಳೆದರೂ ಯಶವಂತ ಕೆಳಗೆ ಬಾರದ ಕಾರಣ ಅವರ ಸಹೋದರಿ ಟೆರೇಸ್ ಗೆ ಮೇಲೇರಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಯಶವಂತ ಉಪ್ಪಳ ಶಾಲಾ ಬಳಿಯ ಪೆಟ್ರೋಲ್ ಬಂಕ್ ನಲ್ಲಿ ಎರಡು ವರ್ಷ ಗಳಿಂದ ಉದ್ಯೋಗ ದಲ್ಲಿದ್ದು, ಸೋಮವಾರ ಸಂಜೆ ಕೆಲಸಕ್ಕೆ ತೆರಳಲು ಸಿದ್ದತೆ ನಡೆಸುತ್ತಿದ್ದು, ಈ ನಡುವೆ ಟೆರೇಸ್ ನ ಮೇಲೆ ಬಿದ್ದಿದ್ದ ತೆಂಗಿನ ಗರಿಯನ್ನು ತೆಗೆಯಲು ತೆರಳಿದ್ದಾಗ ಈ ಘಟನೆ ನಡೆದಿದೆ.

ಈ ಬಗ್ಗೆ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News