ಕಾಸರಗೋಡು: ಚೂರಿ ಇರಿತಕ್ಕೊಳಗಾಗಿದ್ದ ಯುವಕ ಮೃತ್ಯು

Update: 2023-06-26 10:50 GMT

ಕಾಸರಗೋಡು: ಚೂರಿ ಇರಿತಕ್ಕೊಳಗಾಗಿದ್ದ ಯುವಕನೋರ್ವ ಮೃತಪಟ್ಟ ಘಟನೆ ಬದಿಯಡ್ಕದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮಧೂರು ಅರಂತೋಡಿನ ಸಂದೀಪ್ (26) ಕೊಲೆಗೀಡಾದ ಯುವಕ. ಆದಿತ್ಯವಾರ ಮಧ್ಯಾಹ್ನ ಯುವತಿಗೆ ಕಿರುಕುಳ ನೀಡಿದ ಬಗ್ಗೆ ನಡೆದ ವಾಗ್ವಾದದಲ್ಲಿ ಕೃತ್ಯ ನಡೆದಿರುವುದಾಗಿ ಪ್ರಾಥಮಿಕ ತನಿಖೆ ಯಿಂದ ತಿಳಿದುಬಂದಿದೆ.

ಆರೋಪಿಯನ್ನು ಕಜಂಪಾಡಿಯ ಪವನ್ ರಾಜ್ ಎಂದು ಗುರುತಿಸಲಾಗಿದ್ದು, ಈತನಿಗಾಗಿ ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗಂಭೀರ ಗಾಯಗೊಂಡ ಸಂದೀಪ್ ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಇಂದು ಮಧ್ಯಾಹ್ನದ ವೇಳೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News