ಕೊಡಗು: ಚೂರಿ ಇರಿದು ಯುವಕನ ಹತ್ಯೆ; ಅರೋಪಿಯ ಬಂಧನ

Update: 2024-02-06 08:51 GMT

ಮಡಿಕೇರಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ  ಸೋಮವಾರ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ಯುವಕನನ್ನು ಮಡಿಕೇರಿ ಗಣಪತಿ ಬೀದಿ‌ ನಿವಾಸಿ ಸಾಜಿದ್ (22) ಎಂದು ಗುರುತಿಸಲಾಗಿದೆ. ಮೈಸೂರು ರಸ್ತೆಯಲ್ಲಿರುವ ಸಾಜಿದ್ ಶ್ರೀನಿಧಿ ಎಂಬಾತನ ಸರ್ವಿಸ್ ಸ್ಟೇಷನ್​ಗೆ ಬೈಕ್ ಸರ್ವಿಸ್​ ಮಾಡಿಸಲೆಂದು ಬಂದಿದ್ದ. ಈ ವೇಳೆ ಇಬ್ಬರ ನುಡವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಆರೋಪಿ ಶ್ರೀನಿಧಿ ಚೂರಿಯಿಂದ ಇರಿದಿದ್ದ ಎನ್ನಲಾಗಿದೆ.

ಗಂಭೀರ ಗಾಯಗೊಂಡ ಸಜೀದ್ ನನ್ನು ಹೆಚ್ಚಿನ ಚಿಕಿತ್ಸೆಗೆ‌ ಮೈಸೂರಿಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಐಾಗದೆ ಮೃತಪಟ್ಟಿದ್ದಾನೆ.  ಈ  ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕುಶಾಲನಗರ ಟೌನ್ ಠಾಣಾ ಪೊಲೀಸರು ಆರೋಪಿ ಶ್ರೀನಿಧಿಯನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News