ಮಡಿಕೇರಿ | ಬಸ್, ದ್ವಿಚಕ್ರ ವಾಹನದ ನಡುವೆ ಢಿಕ್ಕಿ : ಮಹಿಳೆ ಸಾವು

Update: 2024-01-30 11:33 GMT

ಮಡಿಕೇರಿ: ಸಾರಿಗೆ ಬಸ್ ಮತ್ತು ದ್ವಿಚಕ್ರ ವಾಹನ ನಡುವೆ ಢಿಕ್ಕಿ ಸಂಭವಿಸಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ.

ಸಿದ್ದಾಪುರದ ಲಲಿತಾ (53) ಎಂಬವರನ್ನು ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಅತ್ತೂರು ಕಡೆಯಿಂದ ಗುಡ್ಡೆಹೊಸೂರಿಗೆ ಬರುತ್ತಿದ್ದ ದ್ವಿಚಕ್ರ ವಾಹನ ನಿಯಂತ್ರಣ ತಪ್ಪಿ ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ನಡಿ ಸಿಲುಕಿದ ಪರಿಣಾಮ ಲಲಿತಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಲಲಿತಾ ಅವರ ಸಹೋದರಿ ಪುತ್ರಿ ಸಿಂಚನಾ ಗಂಭೀರ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News