ಮಡಿಕೇರಿ| ಕಾಡಾನೆ ದಾಳಿ: ಕಾರ್ಮಿಕ ಮಹಿಳೆಗೆ ಗಂಭೀರ ಗಾಯ

Update: 2024-01-15 13:12 GMT

ಸಾಂದರ್ಭಿಕ ಚಿತ್ರ

ಮಡಿಕೇರಿ: ಕಾಡಾನೆ ದಾಳಿ ಮಾಡಿದ ಪರಿಣಾಮ ಕಾರ್ಮಿಕ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪ ಗುಹ್ಯ ಪಳ್ಳಕೆರೆ ಗ್ರಾಮದಲ್ಲಿ ನಡೆದಿದೆ.

ಅಸ್ಸಾಂ ಮೂಲದ ಅಮಿರನಾ (35) ಎಂಬುವವರೇ ಗಾಯಗೊಂಡಿರುವ ಮಹಿಳೆಯಾಗಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕರು ತೋಟದ ಕೆಲಸಕ್ಕೆ ತೆರಳುತ್ತಿದ್ದ ಸಂದರ್ಭ ಕಾಡಾನೆ ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆ ಹಾವಳಿ ತಡೆಗೆ ಶಾಶ್ವತ ಪರಿಹಾರ ಸೂಚಿಸುವಂತೆ ಗ್ರಾಮಸ್ಥರು ಹಾಗೂ ಕಾರ್ಮಿಕರು ಒತ್ತಾಯಿಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News