ಕೊಡಗು | ಕೆರೆಯಲ್ಲಿ ಸಿಲುಕಿ ಕಾಡಾನೆ ಸಾವು

Update: 2024-08-29 12:43 GMT

ಮಡಿಕೇರಿ: ಕೆರೆಯ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಕಾಡಾನೆಯೊಂದು ದುರ್ಮರಣಕ್ಕೀಡಾಗಿರುವ ಘಟನೆ ಕೊಡಗು ಜೆಲ್ಲಡಯ ಅಮ್ಮತ್ತಿ ಸಮೀಪದ ಕಾಫಿ ತೋಟದಲ್ಲಿ ನಡೆದಿದೆ.

ಸುಮಾರು ಹತ್ತು ವರ್ಷದ ಗಂಡಾನೆಯ ಮೃತದೇಹ ಕೆರೆಯಲ್ಲಿ ಇಂದು ಪತ್ತೆಯಾಗಿದೆ. ಎರಡು ದಿನಗಳ ಹಿಂದೆ ಕಾಡಾನೆ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ.

ಕಾಫಿ ತೋಟದ ಕೆರೆಗೆ ನೀರು ಕುಡಿಯಲೆಂದು ಬಂದಿದ್ದ ಕಾಡಾನೆ, ಆಕಸ್ಮಿಕವಾಗಿ ಬಿದ್ದು ಮೇಲೆ ಬರಲು ಸಾಧ್ಯವಾಗದೆ ಸಾವನ್ನಪ್ಪಿರುವ ಸಾಧ್ಯತೆ ಇದೆ. ಗುರುವಾರ ಬೆಳಿಗ್ಗೆ ಕಾರ್ಮಿಕರು ನೀರಿನಲ್ಲಿ ತೇಲುತ್ತಿದ್ದ ಆನೆಯ ಮೃತ ದೇಹವನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಡಿಎಫ್‍ಓ ಜಗನ್ನಾಥ್, ಎಸಿಎಫ್ ಗೋಪಾಲ್, ಆರ್‌ ಎಫ್‍ಓ ಶಿವರಾಂ, ವನ್ಯಜೀವಿ ವೈದ್ಯಾಧಿಕಾರಿ ಡಾ.ಚೆಟ್ಟಿಯಪ್ಪ ಹಾಗೂ ಸಿಬ್ಬಂದಿಗಳ ತಂಡ ಆಗಮಿಸಿ ಪರಿಶೀಲನೆ ನಡೆಸಿದರು. ಕಾಡಾನೆಯ ಮೃತದೇಹವನ್ನು ನೀರಿನಿಂದ ಹೊರ ತೆಗೆದು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯಕ್ರಿಯೆ ಮಾಡಲಾಯಿತು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News