ಕೊಡಗು: ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಸಿಎಂ ಭೇಟಿ, ಪರಿಶೀಲನೆ

Update: 2024-08-02 10:15 GMT

ಕೊಡಗು ಆ 2: ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಕುಟ್ಟದ ಗುಡ್ಡ ಕುಸಿತ ಪ್ರದೇಶಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳು ಮತ್ತು ಸ್ಥಳೀಯರ ಜೊತೆ ಚರ್ಚಿಸಿದರು.

ಗುಡ್ಡ ಕುಸಿತದ ಪರಿಣಾಮ ಸುಮಾರು 20ಕ್ಕೂ ಹೆಚ್ಚು ಕುಟುಂಬಗಳು ಸಂಪರ್ಕ ಕಳೆದುಕೊಂಡಿದ್ದು, ಇಲ್ಲಿ ತೂಗು ಸೇತುವೆ ನಿರ್ಮಿಸುವ ಜೊತೆಗೆ ತುರ್ತಾಗಿ ರಸ್ತೆ ನಿರ್ಮಾಣದ ಜೊತೆಗೆ ಇತರ ದುರಸ್ತಿ ಕಾರ್ಯಗಳನ್ನು ಮುಗಿಸುವಂತೆ ಸೂಚಿಸಿದರು.

ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಗುಡ್ಡ ಕುಸಿತದ ಪರಿಣಾಮಗಳನ್ನು ಮತ್ತು ತೆಗೆದುಕೊಳ್ಳಲಾಗಿರುವ ಸುರಕ್ಷತಾ ಕ್ರಮಗಳು ಹಾಗೂ ಕಾಮಗಾರಿಗಳ ಬಗ್ಗೆ ಮುಖ್ಯಮಂತ್ರಿಗೆ ವಿವರಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಬೋಸ್ ರಾಜು, ಶಾಸಕರಾದ ಪೊನ್ನಣ್ಣ , ಮಂಥರ್ ಗೌಡ ಹಾಗೂ ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News