ಮಡಿಕೇರಿ | ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ : ಐವರ ಬಂಧನ

Update: 2024-07-10 17:31 GMT

ಬಂಧಿತ ಆರೋಪಿಗಳು

ಮಡಿಕೇರಿ: ಓರ್ವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಹಾಗೂ ಮತೋರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದ 12 ಗಂಟೆಯ ಒಳಗಾಗಿ ಪ್ರಕರಣದ 5 ಮಂದಿ ಆರೋಪಿಗಳನ್ನು ಕುಟ್ಟ ಪೊಲೀಸರು ಬಂಧಿಸಿದ್ದಾರೆ.

ಪೊನ್ನಂಪೇಟೆ ತಾಲೂಕಿನ ಕುಟ್ಟ ನಾಥಂಗಾಲ ನಿವಾಸಿ ನವೀಂದ್ರ(24), ಅಕ್ಷಯ್(27), ಕೇರಳದ ತೋಲ್ಪಟ್ಟಿ ನಡುಂದನ ಕಾಲೋನಿ ನಿವಾಸಿಗಳಾದ ರಾಹುಲ್(21), ಮನು(25) ಹಾಗೂ ಸಂದೀಪ್(27) ಎಂಬವರೇ ಬಂಧಿತ ಆರೋಪಗಳಾಗಿದ್ದಾರೆ.

ಪ್ರಕರಣ ಹಿನ್ನೆಲೆ:

ಜು.9ರ ಮಧ್ಯಾಹ್ನ 3.15 ಗಂಟೆಗೆ ಕುಟ್ಟದಿಂದ ನಾಗರಹೊಳೆ ಕಡೆ ಹೋಗುವ ಮಾರ್ಗದಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಹಾಗೂ ಮೂರು ಮಂದಿ ಯುವಕರು ತೆರಳುತ್ತಿದ್ದರು. ಈ ವೇಳೆ ಕುಟ್ಟ ಕಡೆಯಿಂದ ಬರುತ್ತಿದ್ದ ಕಾರನ್ನು ತಡೆದು ಕಾರಿನಲ್ಲಿದ್ದ ಇಬ್ಬರು ಅಪರಿಚಿತರೊಂದಿಗೆ ತಮ್ಮನ್ನು ನಾಗರಹೊಳೆ ಕಡೆ ಬಿಡುವಂತೆ ಬಾಲಕಿಯರು ಕೇಳಿದ್ದರು. ಹೀಗಾಗಿ ಕಾರಿನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರು ಹಾಗೂ ಮೂರು ಮಂದಿ ಯುವಕರು ಕೂಡ ಪ್ರಯಾಣಿಸಿದ್ದಾರೆ. ಸ್ವಲ್ಪ ದೂರ ತೆರಳಿದ ನಂತರ ರಸ್ತೆ ಬದಿಯ ಕಾಫಿ ತೋಟದ ಬಳಿ ಕಾರಿನಲ್ಲಿದ್ದ ಅಪರಿಚಿತ ಇಬ್ಬರು ವ್ಯಕ್ತಿಗಳು ಓರ್ವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಜೊತೆಯಲ್ಲಿ ಬಂದಿದ್ದ ಇತರ ಮೂರು ಮಂದಿ ಯುವಕರು ಕೂಡ ಮತ್ತೋರ್ವ ಅಪ್ರಾಪ್ತೆಯ ಮೇಲೆ ಅತ್ಯಾಚಾರಕ್ಕೆ ಪ್ರಯತ್ನಿಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಕುರಿತು ಕುಟ್ಟ ಪೊಲೀಸ್ ಠಾಣೆಯಲ್ಲಿ 137(2), 140(4), 70(2), 76 ಬಿಎನ್‍ಎಸ್ ಮತ್ತು 4 ಹಾಗೂ ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿತ್ತು. ಅಪರಾಧ ಕೃತ್ಯದ ಕುರಿತು ದೂರುದಾರರು ನೀಡಿದ ಮಾಹಿತಿ ಹಾಗೂ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ ಪೊಲೀಸರು ಕೊಡಗು ಜಿಲ್ಲೆ ಸೇರಿದಂತೆ ನೆರೆಯ ಕೇರಳ ರಾಜ್ಯದ ಒಟ್ಟು 5 ಮಂದಿ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ವಿರಾಜಪೇಟೆ ಡಿವೈಎಸ್‍ಪಿ ಆರ್.ಮೋಹನ್ ಕುಮಾರ್, ಕುಟ್ಟ ವೃತ್ತನಿರೀಕ್ಷಕ ಸಿ.ಎ.ಮಂಜಪ್ಪ, ಕುಟ್ಟ ಠಾಣಾಧಿಕಾರಿ ಹೆಚ್.ಕೆ.ಮಹದೇವ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News