ಮಡಿಕೇರಿ | ಸ್ಕೂಟರ್ ನಲ್ಲಿ ತೆರಳುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ 6.18 ಲಕ್ಷ ರೂ.ದರೋಡೆ

Update: 2024-07-30 15:30 GMT

ಸಾಂದರ್ಭಿಕ ಚಿತ್ರ

ಮಡಿಕೇರಿ: ಸ್ಕೂಟರ್ ನಲ್ಲಿ ತೆರಳುತ್ತಿದ್ದ ದಂಪತಿಗಳನ್ನು ಅಡ್ಡಗಟ್ಟಿ, ಹಲ್ಲೆ ಮಾಡಿ 6.18ಲಕ್ಷ ರೂ.ನಗದನ್ನು ದರೋಡೆ ಮಾಡಿರುವ ಘಟನೆ ಸೋಮವಾರಪೇಟೆ ಪಟ್ಟಣದ ಕಿಬ್ಬೆಟ್ಟ ಗ್ರಾಮದ ರಸ್ತೆಯಲ್ಲಿ ಸೋಮವಾರ ರಾತ್ರಿ ವರದಿಯಾಗಿದೆ.

ಪಟ್ಟಣದ ಖಾಸಗಿ ಬಸ್ ನಿಲ್ದಾಣ ಸಮೀಪ ಇರುವ ಮೊಬೈಲ್ ಕರೆನ್ಸಿ ಹೋಲ್‍ಸೇಲ್ ಅಂಗಡಿಯ ಮಾಲೀಕ ಕೆ.ಎಂ.ನೇಮಿರಾಜ್ ಹಣ ಕಳೆದುಕೊಂಡ ವರ್ತಕರಾಗಿದ್ದಾರೆ.

ಸೋಮವಾರ ರಾತ್ರಿ ಪತ್ನಿ ಆಶಾ ಅವರೊಂದಿಗೆ ವ್ಯಾಪಾರದ ಹಣವನ್ನು ಸ್ಕೂಟರ್ ನಲ್ಲಿಟ್ಟುಕೊಂಡು ಕಿಬ್ಬೆಟ್ಟ ಗ್ರಾಮದ ಮನೆಗೆ ತೆರಳುತ್ತಿದ್ದ ಸಂದರ್ಭ ಕಾರು ಮತ್ತು ಬೈಕ್‍ನಲ್ಲಿ ಬಂದ ಐವರು ಸ್ಕೂಟರ್ ರನ್ನು ಅಡ್ಡಗಟ್ಟಿದ್ದಾರೆ. ಆಶಾ ಅವರನ್ನು ತಳ್ಳಿ, ತಲೆಗೆ ಹಲ್ಲೆ ಮಾಡಿದ್ದಾರೆ. ನಂತರ ನೇಮಿರಾಜ್ ಮುಖಕ್ಕೆ ಖಾರದ ಪುಡಿ ಎರಚಿ, ಹಣದ ಬ್ಯಾಗ್ ನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ನೇಮಿರಾಜ್ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಸ್ಥಳಕ್ಕೆ ಎಸ್.ಪಿ.ರಾಮರಾಜನ್, ಡಿವೈಎಸ್‍ಪಿ ಗಂಗಾಧರಪ್ಪ ಭೇಟಿ ಪರಿಶೀಲನೆ ನಡೆಸಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News