ಮಡಿಕೇರಿ | ತೋಟವೊಂದರಲ್ಲಿ ಕಾಡಾನೆಯ ಕಳೇಬರ ಪತ್ತೆ

Update: 2024-08-19 11:46 GMT

ಮಡಿಕೇರಿ : ಪೊನ್ನಂಪೇಟೆ ತಾಲ್ಲೂಕಿನ ಕಳತ್ಮಾಡು ಗ್ರಾಮದ ತೋಟವೊಂದರಲ್ಲಿ ಕಾಡಾನೆಯೊಂದರ ಮೃತದೇಹ ಪತ್ತೆಯಾಗಿದೆ. ರವಿವಾರ ಸಂಜೆ ಆನೆ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ.

ಸ್ಥಳಕ್ಕೆ ಎ.ಸಿ.ಎಫ್ ಗೋಪಾಲ್, ಪೊನ್ನಂಪೇಟೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿದರು. ಕಾಡಾನೆಯ ಸಾವಿಗೆ ಕಾರಣ ತಿಳಿದು ಬಂದಿಲ್ಲ. 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News