ಮಡಿಕೇರಿ | ಲಾರಿ-ಟ್ಯಾಂಕರ್ ನಡುವೆ ಢಿಕ್ಕಿ : ಓರ್ವ ಮೃತ್ಯು

Update: 2024-08-25 09:28 GMT

ಮಡಿಕೇರಿ: ಲಾರಿ ಮತ್ತು ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಓರ್ವ ಸಾನ್ನಪ್ಪಿರುವ ಘಟನೆ ಗುಡ್ಡೆಹೊಸೂರುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಕುಶಾಲನಗರದಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಕುಶಾಲನಗರದ ಕಡೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಲಾರಿಯಲ್ಲಿದ್ದ ಸುಂಟಿಕೊಪ್ಪದ ಕಾರ್ಮಿಕ ರಾಜು ಎಂದು ಗುರುತಿಸಲಾಗಿದೆ. ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬಾರ್ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News