ಮಡಿಕೇರಿ: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Update: 2024-10-15 16:52 GMT

ಸಾಂದರ್ಭಿಕ ಚಿತ್ರ 

ಮಡಿಕೇರಿ: ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ಘಟನೆ ಭಾಗಮಂಡಲದಲ್ಲಿ ನಡೆದಿದೆ.

ಚೇರಂಗಾಲ ನಿವಾಸಿ ಮತ್ತಾರಿಮನೆ ಕರುಣಾಕರ(34) ಎಂಬವರು ಮೃತಪಟ್ಟವರು. ಕರುಣಾಕರ ಹಾಗೂ ಮತ್ತಿಬ್ಬರು ಚೇರಂಗಾಲದಿಂದ ಸುಮಾರು 1.5 ಕಿ.ಮೀ ದೂರದ ಪ್ರದೇಶದಲ್ಲಿ ತೆರಳುತ್ತಿದ್ದಾಗ ಕಾಡಾನೆ ದಾಳಿ ಮಾಡಿದೆ. ಇಬ್ಬರು ಕಾಡಾನೆಯಿಂದ ತಪ್ಪಿಸಿಕೊಂಡಿದ್ದಾರೆ, ಆದರೆ ಕರುಣಾಕರ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಅರಣ್ಯಾಧಿಕಾರಿಗಳು ಹಾಗೂ ಭಾಗಮಂಡಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆ ಕುರಿತು ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashfaq

contributor

Byline - ವಾರ್ತಾಭಾರತಿ

contributor

Similar News