ಮಡಿಕೇರಿ | ಹಾರಂಗಿ ಹಿನ್ನೀರಿನಲ್ಲಿ ಈಜಲು ಇಳಿದಿದ್ದ ಪ್ರವಾಸಿಗ ನೀರು ಪಾಲು

Update: 2024-06-30 15:01 GMT

ಮಡಿಕೇರಿ : ಪ್ರವಾಸಕ್ಕೆಂದು ಕೊಡಗು ಜಿಲ್ಲೆಗೆ ಬಂದಿದ್ದ ವ್ಯಕ್ತಿಯೊಬ್ಬರು ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಮೈಸೂರು ಮೂಲದ ಶಶಿ (30) ಎಂದು ಗುರುತಿಸಲಾಗಿದೆ. ಈಜಲು ತೆರಳಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ. ಪ್ರವಾಸಿತಾಣಗಳನ್ನು ವೀಕ್ಷಿಸಲೆಂದು ಮೈಸೂರಿನಿಂದ ಸುಮಾರು 15 ಮಂದಿ ಆಗಮಿಸಿದ್ದರು ಎಂದು ತಿಳಿದು ಬಂದಿದೆ.

ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿಗಳಿಂದ ಮೃತದೇಹದ ಶೋಧ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News