ಮಡಿಕೇರಿ| ಲಾರಿ-ಸ್ಕೂಟರ್‌ ಮುಖಾಮುಖಿ ಢಿಕ್ಕಿ: ಇಬ್ಬರು ಯುವಕರು ಸಾವು

Update: 2024-07-16 12:44 GMT

ರಕ್ಷಿತ್ / ಮಂಜು 

ಮಡಿಕೇರಿ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲೇ ಮೃತಪಟ್ಟಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 275ರ ಕೊಡಗರಹಳ್ಳಿ ಹೊಸಕೋಟೆ ನಡುವಿನ ಮಾರುತಿ ನಗರದ ತಿರುವಿನಲ್ಲಿ ನಡೆದಿದೆ.

ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಗರಗಂದೂರು ಗ್ರಾಮದ ಮಂಜು(25) ಹಾಗೂ ಸುಂಟಿಕೊಪ್ಪ ಸಮೀಪದ ಬಾಳೆಕಾಡು ಗ್ರಾಮದ ರಕ್ಷಿತ್ (22) ಮೃತಪಟ್ಟವರು.

ಮಂಜು ಹಾಗೂ ರಕ್ಷಿತ್ ಸುಂಟಿಕೊಪ್ಪದಿಂದ 7ನೇ ಹೊಸಕೋಟೆಗೆ ಊಟ ಮಾಡಿ ಬರಲೆಂದು ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಕುಶಾಲನಗರದಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ ಎಂದು ಹೇಳಲಾಗಿದೆ. ಅಪಘಾತದ ಸಂದರ್ಭ ಇಬ್ಬರು ಹೆದ್ದಾರಿಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಸುಂಟಿಕೊಪ್ಪ ಠಾಣಾಧಿಕಾರಿ ಎಂ.ಸಿ.ಶ್ರೀಧರ್, ಅಪರಾಧ ವಿಭಾಗದ ಸಬ್‍ಇನ್ಸ್‍ಪೆಕ್ಟರ್ ಸ್ವಾಮಿ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News