ಕೋಲಾರ: ಎಟಿಎಂ ಯಂತ್ರವನ್ನೇ ಕದ್ದೊಯ್ದ ಕಳ್ಳರು!

Update: 2024-01-03 04:40 GMT

ಕೋಲಾರ, ಜ.3: ಎಟಿಎಂ ಯಂತ್ರವನ್ನೇ ಕದ್ದೊಯ್ದ ಘಟನೆ ಮಾಲೂರು ತಾಲೂಕಿನ ಚಿಕ್ಕ ತಿರುಪತಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಚಿಕ್ಕ ತಿರುಪತಿ ಗ್ರಾಮದಲ್ಲಿರುವ ಕೆನರಾ ಬ್ಯಾಂಕಿಗೆ ಸೇರಿದ ಎಟಿಎಂ ಯಂತ್ರವನ್ನು ಎಟಿಎಂ ಕೇಂದ್ರದಿಂದ ಕಿತ್ತು ಕದ್ದೊಯ್ದಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮಂಗಳವಾರ ತಡರಾತ್ರಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಕೃತ್ಯ ಎಸಗುವ ಮುನ್ನ ಎಟಿಎಂನಲ್ಲಿದ್ದ ಸಿಸಿಟಿವಿ ಕ್ಯಾಮರಾವನ್ನು ಕಳ್ಳರು ಧ್ವಂಸಗೈದಿದ್ದಾರೆ.

ಘಟನಾ ಸ್ತಳಕ್ಕೆ ಕೋಲಾರ ಎಎಸ್ಪಿ ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಸ್ಥಳಕ್ಕೆ ಬೆರಳಚ್ಚು ತಂಡ ಹಾಗೂ ಶ್ವಾನದಳ ಕರೆಸಲಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಈ ಬಗ್ಗೆ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


 



Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News