ಸಚಿವ ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ

Update: 2024-10-04 10:49 GMT

ಕೊಪ್ಪಳ: ಒಳ ಮೀಸಲಾತಿ ಜಾರಿ ಸಂಬಂಧ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. ಈ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೊಪ್ಪಳ ತಾಲೂಕಿನ ಗಿಣಗೇರಾ ಏರ್ ಸ್ಟ್ರಿಪ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,

ಜಾತಿ ಗಣತಿ ಅನುಷ್ಠಾನ ಮಾಡಬೇಕು ಎಂದು ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಅವರ ಅಭಿಪ್ರಾಯ ಹೇಳಿದ್ದಾರೆ. ಅದನ್ನು ಕ್ಯಾಬಿನೆಟ್ ನಲ್ಲಿ ತಂದು ಚರ್ಚೆ ಮಾಡಬೇಕು. ಹಿಂದುಳಿದ ವರ್ಗಗಳ ಆಯೋಗದ ಜೊತೆ ಚರ್ಚೆ ಮಾಡಬೇಕಿದೆ. ಅದಕ್ಕೆಲ್ಲಾ ಸಮಯ ತಗಲುತ್ತದೆ ಎಂದರು.

ಜಿ.ಟಿ.ದೇವೇಗೌಡ ತಮ್ಮ ಪರವಾಗಿ ಮಾತನಾಡಿರುವ ಬಗ್ಗೆ ಮಾಧ್ಯಮದವರು ಗಮನಸೆಳೆದಾಗ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಜಿ.ಟಿ.‌ದೇವೇಗೌಡರು ಹೇಳಿರುವುದು ಸರಿಯಿದೆ. ಅವರ ಪಕ್ಷದವರೇ ಅಲ್ವಾ, ಅವರು ಹೇಳಿದ ಮೇಲೆ ಏನು ಅರ್ಥ, ನನ್ನ ಬಗ್ಗೆ ಕುಮಾರಸ್ವಾಮಿಗೆ ಭಯ. ನಾನು ಅಧಿಕಾರದಲ್ಲಿ ಇದ್ದರೆ ಅವರ ಪಕ್ಷ ದುರ್ಬಲವಾಗುತ್ತದೆ ಅನ್ನೋ ಭಯ ಅವರಲ್ಲಿ ಇದೆ ಎಂದರು.

Full View

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News