ಕೊಪ್ಪಳ: ಈಜಲು ತೆರಳಿದ್ದ ವಿದ್ಯಾರ್ಥಿ ಮೃತ್ಯು

Update: 2024-09-11 03:50 GMT

ಕೊಪ್ಪಳ: ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಂದ್ರಾಳ ಗ್ರಾಮದ  ಫಕೀರ ಗೌಡ ಸಾವಿಗೀಡಾದ ವಿದ್ಯಾರ್ಥಿ  ಎಂದು ಗುರಿತಿಸಲಾಗಿದೆ.

ಮೈನಹಳ್ಳಿಯ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಫಕೀರ ಗೌಡ ಮಂಗಳವಾರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈಜಲು ಕೆರೆಗೆ ಹೋಗಿದ್ದ. ಆದರೆ ನೀರಿಗಿಳಿದ ವಿದ್ಯಾರ್ಥಿ ಮತ್ತೆ ಮೇಲೆ ಬಂದಿಲ್ಲ, ಇದನ್ನು ನೋಡಿದ ಇಬ್ಬರೂ ಸ್ನೇಹಿತರು ಶಾಲೆಗೆ ಓಡಿ ಹೋಗಿ ಶಿಕ್ಷಕರಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಶಿಕ್ಷಕರು ಮತ್ತು ಮತ್ತಿಬ್ಬರು ನೀರಿನಲ್ಲಿ ಹುಡುಕಾಟ ನಡೆಸಿದ್ದಾರೆ.‌ ಆದರೆ ವಿದ್ಯಾರ್ಥಿಯು ಕೆಸರಿನಲ್ಲಿ ಸಿಲುಕಿಕೊಂಡ ಕಾರಣ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News