ನಮ್ಮ ದೇಶದ ಸ್ವಾತಂತ್ರ್ಯ ಹೋರಾಟಗಾಥೆಯು ಸ್ಮರಣೀಯವಾಗಿದೆ : ಸಚಿವ ಶಿವರಾಜ್ ತಂಗಡಗಿ

Update: 2024-08-15 09:40 GMT

ಕೊಪ್ಪಳ: ನಮ್ಮ ದೇಶದ ಸ್ವಾತಂತ್ರ್ಯದ ಹೋರಾಟಗಾಥೆಯು ಸ್ಮರಣೀಯವಾಗಿದೆ. ಜವಾಹರಲಾಲ್ ನೆಹರು ಅವರು 1947 ಆ.14ರ ಮಧ್ಯರಾತ್ರಿ ಭಾರತೀಯ ರಾಜ್ಯಾಂಗದ ಕುರಿತು ಮಾಡಿದ ಭಾಷಣವನ್ನು ನಾವು ಮತ್ತೆ ಮತ್ತೆ ಸ್ಮರಿಸಬೇಕಿದೆ. ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ಇಂದು ನಗರದ ಜಿಲ್ಲಾಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ  ದ್ವಜಾರೋಣವನ್ನು ನೆರವೇರಿಸಿ ಮಾತನಾಡಿದ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನಿಯರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ. ನಾವೆಲ್ಲರೂ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯೋಣ. ಜಾತಿ, ಧರ್ಮ, ಭೇದ-ಭಾವ ಹೊಂದದೆ ಎಲ್ಲರೂ ಸಮಾನರಾಗಿ ಶಾಂತಿಯಿಂದ ಬಾಳೋಣ. ದೇಶಪ್ರೇಮ ಬೆಳೆಸಿಕೊಳ್ಳಲು ಪ್ರೇರಣೆಯಾದ ಈ ದಿನದಂದು ಸಮತಾ ಸಮಾಜ ಕಟ್ಟಲು ಸಂಕಲ್ಪ ಮಾಡೋಣ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಕೊಪ್ಪಳ ಜಿಲ್ಲೆಯಲ್ಲಿನ ಹೋರಾಟಗಾರರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಭಾಗಿಯಾದ ಕೊಪ್ಪಳ ಜಿಲ್ಲೆಯ ಮುಂಡರಗಿ ಭೀಮರಾಯರು, ಹಮ್ಮಿಗೆ ಕೆಂಚನಗೌಡರು, ಇಟಗಿಯ ವೀರಭದ್ರಯ್ಯನವರು, ಶಿರೂರು ವೀರಭದ್ರಪ್ಪನವರು, ಶಿವಮೂರ್ತಿಸ್ವಾಮಿ ಅಳವಂಡಿಯವರು, ಜನಾರ್ಧನರಾಯ ದೇಸಾಯಿಯವರು, ಎಲ್.ಕೆ.ಷರಾಫ್ ರವರು, ಬಿಂದು ಮಾಧವರಾವ್ ಅವರು, ಬಿ.ಕೆ. ಪ್ರಾಣೇಶಾಚಾರ್ಯರು, ಮುರಡಿ ಭೀಮಜ್ಜ ಮೊದಲಾದ ಧೀಮಂತರುಗಳು ಹೊಂದಿದ್ದ ದೇಶಪ್ರೇಮದ ಗುಣವು ನಮಗೆಲ್ಲ ಸ್ಫೂರ್ತಿಯಾಗಿದೆ. ಅವರ ಸೇವಾಗುಣವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ.

ಈ ಸಂದರ್ಭದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ್ ಹಿಟ್ನಾಳ್,ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ್, ಜಿಲ್ಲೆಯ ಎಲ್ಲಾ ಅಧಿಕಾರಿಗಳು ಮತ್ತು ಶಾಲಾ ಮಕ್ಕಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News