ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು : ಸಿಎಂ ಸಿದ್ದರಾಮಯ್ಯ

Update: 2025-04-22 23:15 IST
ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು : ಸಿಎಂ ಸಿದ್ದರಾಮಯ್ಯ
  • whatsapp icon

ಮಂಡ್ಯ : ದೇವರನ್ನು ಪೂಜಿಸುವವರಿಗೆ ಆಷಾಡಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲಾ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ ದೊಡ್ಡಬಾಲ ಗ್ರಾಮದಲ್ಲಿ 39 ವರ್ಷಗಳ ಬಳಿಕ ನಡೆಯುತ್ತಿರುವ ಹುಚ್ಚಪ್ಪಸ್ವಾಮಿಯ ಹಾಗೂ ಹದಿನಾಲ್ಕು ಕೂಟದ ದೇವರುಗಳ ಜಾತ್ರಾ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಮಾಡಬಾರದ ಪಾಪಗಳನ್ನು, ಮನುಷ್ಯ ವಿರೋಧಿ ಕೃತ್ಯಗಳನ್ನು ಮಾಡಿ ದೇವರನ್ನು ಅರಸಿ ಹೋಗುವುದರಿಂದ ಪ್ರಯೋಜನ ಇಲ್ಲ. ಮನುಷ್ಯ ಮನುಷ್ಯ ಪ್ರೀತಿಸಬೇಕು. ಸಹಿಷ್ಣತೆ ಇರಬೇಕು ಎಂದರು.

ಸಮಾಜದಲ್ಲಿ ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಬೇರೆ ಬೇರೆ ನಂಬಿಕೆಗಳಿರುತ್ತವೆ. ಒಬ್ಬರ ನಂಬಿಕೆ ಬಗ್ಗೆ ಉಳಿದವರೆಲ್ಲರಿಗೂ ಗೌರವ ಇರಬೇಕು. ಪರಸ್ಪರ ಗೌರವಗಳಿಂದ ಎಲ್ಲರ ನಂಬಿಕೆಗಳನ್ನು ಕಾಣಬೇಕು ಎಂದು‌ ಕರೆ ನೀಡಿದರು.

ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನ ಎಲ್ಲರ ನಂಬಿಕೆಗಳ ಆಚರಣೆಗೆ ಅವಕಾಶ ಇದೆ. ಸಂವಿಧಾನ ಕೊಟ್ಟ ಅವಕಾಶದಿಂದ ನಾನು ಶಿಕ್ಷಣ ಪಡೆದು ಮುಖ್ಯಮಂತ್ರಿಯಾದೆ. ಅಂಬೇಡ್ಕರ್ ಅವರು ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದಾರೆ. ಅದ್ದರಿಂದ ಪ್ರತಿಯೊಬ್ಬರೂ ಇದನ್ನು ಪಾಲಿಸಬೇಕು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News