ಕಾವೇರಿ ನದಿಯಲ್ಲಿ ಕೊಚ್ಚಿಹೋದ ವ್ಯಕ್ತಿ; ವಿಡೀಯೊ ವೈರಲ್

Update: 2024-07-21 13:50 GMT

ಮಂಡ್ಯ: ತುಂಬಿಹರಿಯುತ್ತಿರುವ ಕಾವೇರಿ ನದಿಯಲ್ಲಿ ವ್ಯಕ್ತಿಯೊಬ್ಬರು ಕೊಚ್ಚಿ ಹೋಗಿದ್ದು, ಇದರ ವಿಡೀಯೊ ವೈರಲ್ ಆಗಿದೆ. ಕೊಚ್ಚಿ ಹೋಗುತ್ತಿರುವ ದೃಶ್ಯವನ್ನು ಪ್ರವಾಸಿಗರು ಸೆರೆಹಿಡಿದು ಸಾಮಾಜಿಕ ಜಾಲತಾಣಕ್ಕೆ ಹರಿಯಬಿಟ್ಟಿದ್ದಾರೆ.

ಶನಿವಾರ ಘಟನೆ ಸಂಭವಿಸಿದ್ದು, ರವಿವಾರ ವೀಡಿಯೊ ವೈರಲ್ ಆಗಿದೆ. ಮಳವಳ್ಳಿ ತಾಲೂಕು ಹಲಗೂರು ಹೋಬಳಿ ಪ್ರವಾಸಿತಾಣ ಮುತ್ತಿತ್ತಿ ಬಳಿ ಈ ಘಟನೆ ಸಂಭವಿಸಿದ್ದು, ನೀರುಪಾಲಾದ ವ್ಯಕ್ತಿಯ ಹೆಸರು ವಿಳಾಸ ಪತ್ತೆಯಾಗಿಲ್ಲವೆಂದು ವರದಿಯಾಗಿದೆ.

ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ಠಾಣೆ, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶೋಧ ನಡೆಸಿದ್ದಾರೆ. ಭಾರಿ ನೀರು ಹರಿಯುತ್ತಿರುವುದರಿಂದ ಶೋಧ ಕಾರ್ಯಕ್ಕೆ ತೊಂದರೆ ಉಂಟಾಗಿದೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News