ಮಂಡ್ಯ | ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ

Update: 2024-09-04 15:30 GMT

ಮಂಡ್ಯ : ಪಾಂಡವಪುರ ತಾಲೂಕಿನ ಜಾಗಟೆ ಮಲ್ಲೇನಹಳ್ಳಿ ಗ್ರಾಮದ ಜನರಲ್ಲಿ ಭೀತಿ ಮೂಡಿಸಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ಗ್ರಾಮದ ಜಮೀನಿನಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ, ಕುರಿ, ಮೇಕೆ ಸೇರಿದಂತೆ ಹಲವು ಜಾನುವಾರುಗಳನ್ನು ತಿಂದು ಹಾಕಿತ್ತು. ಈ ಸಂಬಂಧ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು.

ಅರಣ್ಯ ಇಲಾಖೆ ಅಧಿಕಾರಿ ಸಿಬ್ಬಂದಿ ಯೋಗೇಶ್ ಎಂಬವರ ಜಮೀನಿನಲ್ಲಿ ನಾಯಿಯನ್ನು ಕಟ್ಟಿಹಾಕಿ ಬೋನು ಅಳವಡಿಸಿದ್ದರು. ಮಂಗಳವಾರ ತಡರಾತ್ರಿ ಚಿರತೆ ಬೋನಿನೊಳಗೆ ಸೆರೆಯಾಗಿದೆ.

ಚಿರತೆ ಸೆರೆಸಿಕ್ಕಿದ್ದರಿಂದ ಗ್ರಾಮಸ್ಥರು ನಿಟ್ಟಿಸಿಬಿಟ್ಟಿದ್ದಾರೆ. ಸೆರೆಯಾದ ಚಿರತೆಯನ್ನು ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶಕ್ಕಿ ಬಿಡುವುದಾಗಿ ವಲಯ ಅರಣ್ಯಾಧಿಕಾರಿ ಜಗದೀಶ್‍ಗೌಡ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News