ಮಂಡ್ಯ ವಿವಿ ವಿಲೀನ ವಿರೋಧಿಸಿ ಬಿಜೆಪಿ-ಜೆಡಿಎಸ್ ಧರಣಿ

Update: 2025-03-01 19:28 IST
ಮಂಡ್ಯ ವಿವಿ ವಿಲೀನ ವಿರೋಧಿಸಿ ಬಿಜೆಪಿ-ಜೆಡಿಎಸ್ ಧರಣಿ
  • whatsapp icon

ಮಂಡ್ಯ : ಮಂಡ್ಯ ವಿಶ್ವವಿದ್ಯಾನಿಲಯವನ್ನು ಮೈಸೂರು ವಿವಿ ಜತೆ ವಿಲೀನಗೊಳಿಸುವುದನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಶನಿವಾರ ನಗರದಲ್ಲಿ ಪ್ರತಿಭಟನಾ ಧರಣಿ ನಡೆಸಿದರು.

ಹಣವಿಲ್ಲವೆಂದು ರಾಜ್ಯದ 9 ವಿವಿಗಳನ್ನು ರಾಜ್ಯ ಸರಕಾರ ಮುಚ್ಚುವುದು ಸರಿಯಲ್ಲ. ಭಿಕ್ಷೆ ಬೇಡಿಯಾದರೂ ವಿವಿ ಉಳಿಸಿಕೊಳ್ಳಿ ಎಂದು ಭಿಕ್ಷೆ ಬೇಡುವ ಮೂಲಕ ರಾಜ್ಯ ಸರಕಾರವನ್ನು ಧರಣಿನಿರತರು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿ ವಿಪಕ್ಷ ನಾಯಕ ಆರ್.ಅಶೋಕ್, ಸರಕಾರ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದಕ್ಕಾಗಿ ವಿವಿಗಳನ್ನು ಮುಚ್ಚಲಾಗುತ್ತಿದೆ ಎಂದು ಆರೋಪಿಸಿದರು.

ಶೈಕ್ಷಣಿಕವಾಗಿ ಹಿಂದುಳಿದ ಕಾರಣಕ್ಕೆ ಚಾಮರಾಜನಗರ, ಮಂಡ್ಯದಂತಹ ಜಿಲ್ಲೆಗಳಲ್ಲಿ ನಮ್ಮ ಸರಕಾರ ಹೊಸ ವಿವಿ ತೆರೆದಿತ್ತು. ಆದರೆ, ಕಾಂಗ್ರೆಸ್ ಸರಕಾರ ಈ ವಿವಿಗಳನ್ನು ಮುಚ್ಚುವ ಮೂಲಕ ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಅವರು ಟೀಕಿಸಿದರು.

ಶಾಸಕ ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವ ನಾರಾಯಣಗೌಡ, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದಿರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್ ಸೇರಿದಂತೆ ಹಲವು ಮುಖಂಡರು ಧರಣಿಯಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News