ನಾಗಮಂಗಲ ಗಲಾಟೆ | 2.66 ಕೋಟಿ ರೂ. ಮೌಲ್ಯದ ಆಸ್ತಿಪಾಸ್ತಿ ಹಾನಿ : ಜಿಲ್ಲಾಧಿಕಾರಿ ಡಾ.ಕುಮಾರ

Update: 2024-09-18 16:18 GMT

 ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ : ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಸಂಭವಿಸಿದ ಗಲಭೆಯಲ್ಲಿ ಒಟ್ಟು 2.66 ಕೋಟಿ ರೂ. ಆಸ್ತಿಪಾಸ್ತಿ ನಷ್ಟವಾಗಿದ್ದು, ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸೆ.11ರ ತಡರಾತ್ರಿ ಘಟನೆ ನಡೆದಿದ್ದು, ಹಲವು ಅಂಗಡಿಗಳು ಬೆಂಕಿಗೆ ಸುಟ್ಟುಹೋಗಿದ್ದವು. ಮಾರನೆ ದಿನವೇ ಜಿಲ್ಲಾಡಳಿತ ಉಪವಿಭಾಗಾಧಿಕಾರಿ, ಪಿಡಬ್ಲುಯು, ಅಗ್ನಿಶಾಮಕ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳ ತಂಡ ರಚಿಸಿ ವರದಿ ತಯಾರಿಸಿದೆ ಎಂದರು.

ವರದಿಯನ್ನು ಎರಡು ವಿಭಾಗಗಳಲ್ಲಿ ತಯಾರಿಸಲಾಗಿದೆ. ಮೊದಲನೆ ಭಾಗದಲ್ಲಿ ಕಟ್ಟಡ ನಾಶದಲ್ಲಿ ಸುಮಾರು 1.47 ಕೋಟಿ ರೂ. ನಷ್ಟವಾಗಿದೆ. ಎರಡನೆ ಭಾಗದ ಕಟ್ಟಡದ ಒಳಗಿನ 1.18 ಕೋಟಿ ರೂ. ಸಾಮಗ್ರಿಗಳು ನಾಶವಾಗಿವೆ ಎಂದು ತನಿಖಾ ತಂಡ ಸಲ್ಲಿಸಿರುವ ವರದಿಯನ್ನು ರಾಜ್ಯ ಸರಕಾರಕ್ಕೆ ನಿನ್ನೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News