ಕುಮಾರಸ್ವಾಮಿ ಜೈಲಿಗೆ ಹೋಗುವ ಕಾಲ ಹತ್ತಿರ ಬಂದಿದೆ : ಕಾಂಗ್ರೆಸ್‌ ಶಾಸಕ ಕದಲೂರು ಉದಯ

Update: 2024-05-12 09:48 GMT

ಮಂಡ್ಯ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಏನು ಸಾಚ ಅಲ್ಲ. ದೌರ್ಜನ್ಯಕ್ಕೊಳಗಾದ ಮಹಿಳೆಯರು ದೂರು ಕೊಡುವ ಕಾಲ ಬಂದಿದೆ. ಕುಮಾರಸ್ವಾಮಿಯವರು, ಪ್ರಜ್ವಲ್ ರೀತಿ ಪರಿಸ್ಥಿತಿ ಎದುರಿಸಲಿದ್ದಾರೆ ಎಂದು ಮದ್ದೂರು ಕಾಂಗ್ರೆಸ್ ಶಾಸಕ ಕದಲೂರು ಉದಯ ಟೀಕಿಸಿದ್ದಾರೆ

ರವಿವಾರ ಮದ್ದೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, "ಇಷ್ಟು ದಿ‌ನ ಯಾರು ಬಂದು ದೂರು ಕೊಡಲು ಧೈರ್ಯ ಮಾಡಿರಲಿಲ್ಲ. ಸದ್ಯದಲ್ಲಿ ದೂರು ಕೊಡಬಹುದು. ಕುಮಾರಸ್ವಾಮಿ ಸಾಚಾನಾ? ಮಗಳ ವಯಸ್ಸಿನ ಹೆಣ್ಣು ಮಗಳನ್ನು ಪುಸಲಾಯಿಸಿ ಮಗು ಹುಟ್ಟಿಸಿ ರಸ್ತೆಯಲ್ಲಿ ಬಿಟ್ಟಿರುವುದು ಗೊತ್ತಿಲ್ಲವೇ?. ಇದಕ್ಕಿಂತಲೂ ನೀಚತನ ಬೇರೆ ಇದೆಯೇ" ಎಂದು ಅವರು ವಾಗ್ದಾಳಿ ನಡೆಸಿದರು.

ಒಬ್ಬ ಜವಾಬ್ದಾರಿ ಸ್ಥಾನದಲ್ಲಿರುವ ಕುಮಾರಸ್ವಾಮಿ ಪ್ರಜ್ವಲ್ ಪ್ರಕರಣದ ಸಂತ್ರಸ್ತೆಯರ ಕ್ಷಮೆ ಕೇಳಿ ಗೌರವಹಿತವಾಗಿ ನಡೆದುಕೊಳ್ಳಬೇಕಾಗಿತ್ತು. ಅದನ್ನು ಬಿಟ್ಟು ಸರಕಾರದ ವಿರುದ್ಧ ಪ್ರತಿಭಟಿಸುದಕ್ಕೆ ಅಂದ ಭಕ್ತರಿಗೆ ಕುಮ್ಮಕ್ಕು ನೀಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸಿಬಿಐ ತನಿಖೆಗೆ ಒತ್ತಾಯಿಸುತ್ತಿರುವುದು ಪ್ರಕರಣವನ್ನು ದಿಕ್ಕು ತಪ್ಪಿಸುವ ಹುನ್ನಾರವಾಗಿದೆ. ಪ್ರಕರಣವನ್ನು ಭೇದಿಸಲು ಎಸ್ಐಟಿ ಸಮರ್ಥವಾಗಿದೆ. ತಲೆಮರಿಸಿಕೊಂಡಿರುವ ಆರೋಪಿ ಸಾಚಾ ಆಗಿದ್ದರೆ ಎಸ್ಐಟಿ ಮುಂದೆ ಬಂದು ಹೇಳಿಕೆ ನೀಡಲಿ ಎಂದು ಅವರು ತಾಕೀತು ಮಾಡಿದರು

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News