ಬಿಜೆಪಿಯಿಂದ ಟಿಕೆಟ್ ಸಿಗುವ ವಿಶ್ವಾಸ ಇದೆ, ಮಂಡ್ಯದಿಂದಲೇ ಸ್ಪರ್ಧೆ : ಸಂಸದೆ ಸುಮಲತಾ

Update: 2024-02-23 14:54 GMT

Photo: X/@sumalathaA

ಮಂಡ್ಯ : ಲೋಕಸಭೆ ಚುನಾವಣೆಗೆ ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ಖಚಿತ ಎಂದು ಸಂಸದೆ ಸುಮಲತಾ ಅಂಬರೀಷ್ ಪುನರುಚ್ಚಸಿದ್ದು, ಟಿಕೆಟ್ ತಮಗೆ ಸಿಗಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

ದಿಶಾ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಆದ್ದರಿಂದ ಅಂತೆ, ಕಂತೆಗಳಿಗೆ ಅಷ್ಟು ಮಹತ್ವ ಕೊಡಬೇಕಾದ ಅಗತ್ಯ ಇಲ್ಲ. ಜೆಡಿಎಸ್ ನಾಯಕರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದು, ತಮಗೆ ಟಿಕೆಟ್ ನೀಡಬೇಕು ಎಂದು ಕೇಳಿರುತ್ತಾರೆ ಸಹಜ. ಆದರೆ, ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮುಖ್ಯವಾಗುತ್ತದೆ ಎಂದು ಅವರು ಹೇಳಿದರು.

ರಾಜ್ಯದ ಎಲ್ಲಿಯಾದರೂ ಸ್ಪರ್ಧೆಗೆ ಅವಕಾಶ ಇದೆ. ಆದರೆ, ಮಂಡ್ಯದಿಂದಲೇ ಸ್ಪರ್ಧಿಸಿ ಜಿಲ್ಲೆಯಲ್ಲಿ ಬಿಜೆಪಿಯನ್ನು ಮತ್ತಷ್ಟು ಬೆಳೆಸಬೇಕು ಎನ್ನುವುದು ನನ್ನ ಮುಖ್ಯ ಉದ್ದೇಶ. ಟಿಕೆಟ್ ಸಿಗುವ ಭರವಸೆ ಇದೆ ಎಂದು ಅವರು ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಕೆಆರ್‌ಎಸ್ ಜಲಾಶಯದ 20 ಕಿ.ಮೀ. ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧವಿದ್ದರೂ ಅಕ್ರಮ ಗಣಿಗಾರಿಕೆ ಮುಂದುವರಿದಿದೆ. ಪರೀಕ್ಷಾರ್ಥ ಸ್ಫೋಟ ಕಾರ್ಯಾಚರಣೆಗೆ ನಡೆಸುತ್ತಿರುವ ರೈತರಿಗೆ ನನ್ನ ಬೆಂಬಲ ಇದೆ. ಈ ಕಾರ್ಯಾಚರಣೆಗೆ ರೈತಸಂಘ ತಡೆಯಾಜ್ಞೆ ತರಲು ಮುಂದಾಗಿರುವುದು ಒಳ್ಳೆಯದು ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News