ಪುನೀತ್ ಕೆರೆಹಳ್ಳಿ ಬೆಂಬಲಿಸಿ ಎಸಿಪಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆದರಿಕೆ: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶ

Update: 2024-07-31 07:09 GMT

Photo: fb.com/pratapsimha

ಮೈಸೂರು: ಮೆಜೆಸ್ಟಿಕ್ ನ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ನಾಯಿ ಮಾಂಸ ತುಂಬಿರುವ ಬಾಕ್ಸ್ ಗಳು ಬಂದಿವೆ ಎಂದು ಸುಳ್ಳು ಸುದ್ದಿ ಹರಡಿ ಬಂಧನಕ್ಕೊಳಗಾಗಿದ್ದ ಪುನೀತ್ ಕೆರೆಹಳ್ಳಿಯನ್ನು ಬೆಂಬಲಿಸಿ ಮೈಸೂರಿನ ಮಾಜಿ ಸಂಸದ ಪ್ರತಾಪ್ ಸಿಂಹ ಹಾಕಿರುವ ವಿವಾದಾತ್ಮಕ ಪೋಸ್ಟ್ ಈಗ ವೈರಲ್ ಆಗುತ್ತಿದೆ.

ಆರೋಪಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಲಾಕಪ್ ನಲ್ಲಿ ಬಟ್ಟೆ ಬಿಚ್ಚಿ ಕೂರಿಸಿ ಅಪಮಾನಿಸಿದ್ದಾರೆಂದು ಆರೋಪಿಸಿರುವ ಪ್ರತಾಪ್ ಸಿಂಹ ಎಸಿಪಿ ಚಂದನ್ ಅವರಿಗೆ "ಠಾಣೆಗೆ ಬರ್ತಿನಿ ನೀವು ಇರಬೇಕು" ಎಂದು ಬೆದರಿಕೆ ರೀತಿಯಲ್ಲಿ ಪೋಸ್ಟ್ ಹಾಕಿದ್ದಾರೆ.

ಜು. 30ರಂದು (ಮಂಗಳವಾರ) ಟ್ವೀಟ್ ಮಾಡಿರುವ ಪ್ರತಾಪ್ ಸಿಂಹ ಅವರು, “ಸಹೋದರ ಪುನೀತ್ ಕೆರೆಹಳ್ಳಿ ಬಿಡುಗಡೆ ಆಗಿದ್ದಾನೆ. ಆತನನ್ನು ಠಾಣೆಯಲ್ಲಿ ಬೆತ್ತಲುಗೊಳಿಸಿ ಹಿಂಸೆ ಕೊಟ್ಟಿರುವ ಎಸಿಪಿ ಚಂದನ್, ನಾಳೆ ಸ್ಟೇಷನ್ ಗೆ ಬರ್ತೀನಿ, ನೀವು ಇರಬೇಕು’ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಸಾಮಾಜಿಕ ಜಾಲತಾಣ ಬಳಕೆದಾರರು ಪ್ರತಾಪ್ ಸಿಂಹ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ''ನಿಮ್ಮ ಬೆದರಿಕೆಗೆಲ್ಲ ಜಗ್ಗುವವರಲ್ಲ ಕರ್ನಾಟಕ ಪೊಲೀಸ್ . ಪ್ರಾಮಾಣಿಕ ಅಧಿಕಾರಿಗಳನ್ನು ರಕ್ಷಿಸಿಕೊಳ್ಳುವುದು ನಮ್ಮೆಲ್ಲ ಕನ್ನಡಿಗರ ಧರ್ಮ. ನಾವೆಲ್ಲಾ ಅವರೊಂದಿಗಿದ್ದೇವೆ'' ಎಂದು ಹೇಳಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News