ರಾಜಕೀಯ ಉದ್ದೇಶದಿಂದ ಬಿಜೆಪಿ ಪ್ರತಿಭಟನೆ ಮಾಡಿದರೆ ನಾವೂ ಮಾಡುತ್ತೇವೆ: ಸಿದ್ದರಾಮಯ್ಯ

Update: 2024-07-11 07:51 GMT

ಮೈಸೂರು, ಜು.11: ಮುಡಾ ವಿಚಾರವನ್ನು ರಾಜಕೀಯ ಮಾಡುವ ಉದ್ದೇಶದಿಂದ ಬಿಜೆಪಿಯವರು ಪ್ರತಿಭಟನೆ ಮಾಡುವುದಾದರೆ ನಾವು ಇದಕ್ಕೆ ಪ್ರತಿಯಾಗಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ನಗರದ ರಾಮಕೃಷ್ಣ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾದಲ್ಲಿ ಅಕ್ರಮ ನಡೆದಿದಿಯೇ ಇಲ್ಲವೊ ಎಂಬುದನ್ನು ಇಬ್ಬರು ಐಎಎಸ್ ಅಧಿಕಾರಿಗಳ ನೇತೃತ್ವದಲ್ಲಿ ತನಿಖೆ ಮಾಡಲಾಗುತ್ತಿದೆ. ಅಂತಹದರಲ್ಲಿ ಬಿಜೆಪಿಯವರು ರಾಜಕೀಯ ಮಾಡುವ ಉದ್ದೇಶದಿಂದ ಪ್ರತಿಭಟನೆ ಮಾಡಿದರೆ ನಾವು ಮಾಡುತ್ತೇವೆ ಎಂದು ಹೇಳಿದರು.

ಮುಡಾದಲ್ಲಿ ನನ್ನ ಪತ್ನಿಗೆ ಕಾನೂನು ಪ್ರಕಾರವೇ ನಿವೇಶನ ನೀಡಲಾಗಿದೆ. ನಮ್ಮ ವಿಚಾರವನ್ನು ಮುಂದಿಟ್ಟುಕೊಂಡು ಬೇರೆಯವರು ಅಕ್ರಮ ನಡೆಸಿದ್ದರೆ ಬಚಾವ್ ಆಗಲು ಸಾಧ್ಯವಿಲ್ಲ. ನಾವು 50:50 ಅನುಪಾತದಲ್ಲಿ ನಿವೇಶನ ಕೊಡಿ ಎಂದು ಕೇಳಿರಲಿಲ್ಲ. ಮುಡಾದವರೆ ನಮಗೆ ನಿವೇಶನ ನೀಡಿರುವುದು ಎಂದು ಸ್ಪಷ್ಟಪಡಿಸಿದರು.

ನನ್ನ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರೆ ಆಯೋಗ ನನಗೆ ನೋಟಿಸ್ ನೀಡಲಿ ಕಾನೂನು ಪ್ರಕಾರವೇ ನಾನು ಉತ್ತರ ಕೊಡುತ್ತೇನೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News