ಮೈಸೂರು: ಕ್ಷುಲ್ಲಕ ಕಾರಣಕ್ಕೆ ತಾಯಿ, ಸಹೋದರಿಯನ್ನು ಕೆರೆಗೆ ತಳ್ಳಿ ಹತ್ಯೆಗೈದ ಯುವಕ

Update: 2024-01-24 17:44 GMT

ಸಾಂದರ್ಭಿಕ ಚಿತ್ರ

ಮೈಸೂರು: ಕ್ಷುಲ್ಲಕ ಕಾರಣಕ್ಕೆ ತಾಯಿ ಹಾಗೂ ಸಹೋದರಿಯನ್ನು ಕರೆಗೆ ತಳ್ಳಿ ಕೊಲೆ ಮಾಡಿದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಲ್ಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ.

ಸ್ವಂತ ಮಗನಿಂದಲೇ ಕೃತ್ಯ ನಡೆದಿದ್ದು, ಆರೋಪಿ ನಿತಿನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇರೆ ಸಮುದಾಯದ ಹುಡುಗನನ್ನ ತಂಗಿ ಪ್ರೀತಿಸಿದ್ದ ಹಿನ್ನಲೆ ದ್ವೇಷ ಬೆಳೆಸಿಕೊಂಡಿದ್ದ ಅಣ್ಣ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

ಮೊದಲು ಸಹೋದರಿಯನ್ನು ಕೆರೆಗೆ ತಳ್ಳಿದ್ದು, ಈ ವೇಳೆ ರಕ್ಷಿಸಲು ಬಂದ ತಾಯಿಯನ್ನೂ ಕೆರೆಗೆ ತಳ್ಳಿ ಕೊಲೆ ಮಾಡಿದ್ದಾನೆ.

ಹಿರಿಕ್ಯಾತನಹಳ್ಳಿಯ ಅನಿತಾ(40) ಹಾಗೂ ಮಗಳು ಧನುಶ್ರೀ(19) ಮೃತಪಟ್ಟವರು. 

ಸಹೋದರಿ ಬೇರೆ ಸಮುದಾಯದ ಯುವಕನನ್ನು ಪ್ರೀತಿಸುತಿದ್ದ ವಿಚಾರದಲ್ಲಿ ಅಣ್ಣ ತಂಗಿಯರ ನಡುವೆ ವೈಮನಸ್ಸು ಬೆಳೆದಿತ್ತು ಎನ್ನಲಾಗಿದೆ.

ನಿನ್ನೆ ಸಂಜೆ ಹೆಮ್ಮಿಗೆ ಗ್ರಾಮದಲ್ಲಿರುವ ಮಾವನ ಮನಗೆಗೆ ಹೋಗುವ ಕಾರಣ ನೀಡಿ ತಾಯಿ ಹಾಗೂ ತಂಗಿಯನ್ನು ನಿತಿನ್ ಬೈಕ್ ನಲ್ಲಿ ಕರೆದೊಯ್ದಿದ್ದಾನೆ. ಮರೂರು ಕೆರೆ ಬಳಿ ಬೈಕ್ ನಿಲ್ಲಿಸಿ ಮೊದಲು ತಂಗಿಯನ್ನ ಕೆರೆಗೆ ತಳ್ಳಿದ್ದಾನೆ. ನಂತರ ಮಗಳನ್ನು ರಕ್ಷಿಸಲು ಬಂದ ತಾಯಿಯನ್ನೂ ಕೆರೆಗೆ ತಳ್ಳಿದ್ದಾನೆ. ನಂತರ ತಾಯಿಯನ್ನು ರಕ್ಷಿಸಲು ನಿತಿನ್ ಕರೆಗೆ ಹಾರಿದ್ದಾನೆ. ಆದರೆ ಇಬ್ಬರೂ ಸಾವನ್ನಪ್ಪಿದ್ದಾರೆ.

ನಂತರ ಮನೆಗೆ ಹಿಂದಿರುಗಿದ ಆರೋಪಿ ನಿತಿನ್ ತನ್ನ ತಂದೆ ಸತೀಶ್ ಅವರ ಬಳಿ ನಡೆದ ಘಟನೆಯನ್ನು ತಿಳಿಸಿದ್ದಾನೆ. ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News