ಲೋಕಸಭಾ ಚುನಾವಣೆ | ಅರಮನೆಗೆ ತೆರಳಿ ಯದುವೀರ್ ಒಡೆಯರ್‌ಗೆ ಬಿ.ಫಾರಂ ನೀಡಿದ ಬಿಜೆಪಿ ಮುಖಂಡರು

Update: 2024-04-01 09:08 GMT

ಮೈಸೂರು: ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಬಿಜೆಪಿ ಮುಖಂಡರು ಅರಮನೆಗೆ ತೆರಳಿ ಬಿಜೆಪಿ ಪಕ್ಷದ ಬಿ.ಫಾರಂ ನೀಡಿದರು.

ಸೋಮವಾರ ಬೆಳಿಗ್ಗೆ ಅರಮನೆಗೆ ತೆರಳಿದ ಬಿಜೆಪಿ‌ ಮುಖಂಡರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರ ಸಮ್ಮುಖದಲ್ಲಿ ಯದುವೀರ್ ಅವರಿಗೆ ಬಿ.ಫಾರಂ ನೀಡಿ ಶುಭ ಹಾರೈಸಿದರು.

ಈ‌ ಸಂಧರ್ಭದಲ್ಲಿ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಶಾಸಕ ಟಿ.ಎಸ್.ಶ್ರೀವತ್ಸ, ಮಾಜಿ ಶಾಸಕ ಪ್ರೀತಂ ಗೌಡ, ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾ ಗ್ರಾಮಾಂತರ ಅಧ್ಯಕ್ಷ ಎಲ್.ಆರ್ ಮಹದೇವಸ್ವಾಮಿ, ನಗರ ಅಧ್ಯಕ್ಷ ಎಲ್.ನಾಗೇಂದ್ರ, ನಗರ ಪ್ರಧಾನಕಾರ್ಯದರ್ಶಿ ಮಹೇಶ್ ಕೇಬಲ್ , ನಂದೀಶ್ ಹಂಚ್ಯಾ ರವರು,ಮಾಜಿ ಎಂ.ಎಲ್.ಸಿ ಸಿದ್ದರಾಜು ಉಪಸ್ಥಿತರಿದ್ದರು.

ಇಂದು(ಎ.1) ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಯದುವೀರ್

ಮೈಸೂರು-ಕೊಡಗು ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತನ್ನ ತಾಯಿಯೊಂದಿಗೆ ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಶುಭಗಳಿಗೆ ಇರುವುದರಿಂದ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಿದ್ದು, ಎ.3 ರಂದು ಶಕ್ತಿ ಪ್ರದರ್ಶನ ನಡೆಸಿ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಬಿಜೆಪಿ ಮೂಲಗಳು ತಿಳಿಸಿವೆ.

ನಾಮಪತ್ರ ಸಲ್ಲಿಸುವ ವೇಳೆ ಅವರ ತಾಯಿ ಪ್ರಮೋದಾದೇವಿ ಒಡೆಯರ್, ಶಾಸಕ ಟಿ.ಎಸ್.ಶ್ರೀವತ್ಸ, ರಘು, ಪ್ರದೀಪ್ ಕುಮಾರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News