ಮೇಘಾಲಯದ ರಾಜ್ಯಪಾಲರಾಗಿ ನೇಮಕಗೊಂಡ ಮೈಸೂರಿನ ಸಿ.ಎಚ್.ವಿಜಯಶಂಕರ್ ಕುರಿತ ಮಾಹಿತಿ ಇಲ್ಲಿದೆ...

Update: 2024-07-28 09:03 GMT

ಮೈಸೂರು : ಮೇಘಾಲಯದ ನೂತನ ರಾಜ್ಯಪಾಲರಾಗಿ ಮೈಸೂರಿನ ಬಿಜೆಪಿ ಹಿರಿಯ ಮುಖಂಡ ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ರವಿವಾರ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವ ಸಿ.ಎಚ್.ವಿಜಯಶಂಕರ್ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನವರು. ಸಂಘಪರಿವಾರದ ಮೂಲಕ ರಾಜಕೀಯಕ್ಕೆ ಬಂದ ಅವರು ಹುಣಸೂರು ಶಾಸಕರಾಗಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ್ದರು.

ಬಳಿಕ ಮೈಸೂರು ಲೋಕಸಭಾ ಕ್ಷೇತ್ರದಿಂದ ಎರಡು ಬಾರಿ ಸಂಸದರಾಗಿ ಆಯ್ಕೆಯಾಗಿದದ್ದರು. ನಂತರ ವಿಧಾನಪರಿಷತ್ ಸದಸ್ಯರಾಗಿ ಅರಣ್ಯ ಸಚಿವರಾಗಿಯೂ ರಾಜ್ಯದಲ್ಲಿ ವಿಜಯಶಂಕರ್ ಕರ್ತವ್ಯ ನಿರ್ವಹಿಸಿದ್ದಾರೆ.

ಮೇಘಾಲಯ ರಾಜ್ಯಪಾಲರಾಗಿ ಸಿ.ಎಚ್.ವಿಜಯ ಶಂಕರ್ ನೇಮಕವಾಗಿರುವುದಕ್ಕೆ ಮೈಸೂರು ಬಿಜೆಪಿ ಸಂತಸ ವ್ಯಕ್ತಪಡಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News