ಮುಡಾ ಪ್ರಕರಣ | ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ವಿಚಾರಣೆಗೆ ಹಾಜರು

Update: 2024-10-10 10:00 GMT

ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಪ್ರಕರಣದ ಮೂರನೇ ಆರೋಪಿ, ಸಿದ್ದರಾಮಯ್ಯ ಅವರ ಭಾಮೈದ ಮಲ್ಲಿಕಾರ್ಜುನಸ್ವಾಮಿ ಹಾಗೂ ನಾಲ್ಕನೇ ಆರೋಪಿ ದೇವರಾಜು ಅವರು ಮೈಸೂರು ಲೋಕಾಯುಕ್ತ‌ ಪೊಲೀಸ್ ಕಚೇರಿಗೆ ಗುರುವಾರ ವಿಚಾರಣೆಗೆ ಹಾಜರಾಗಿದ್ದಾರೆ.

ಲೋಕಾಯುಕ್ತ ಪೊಲೀಸರು ಈ ಇಬ್ಬರು ಆರೋಪಿಗಳಿಗೆ ಬುಧವಾರದಂದು ನೋಟಿಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು.

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ಧರಾಮಯ್ಯ ಎ1 ಆರೋಪಿಯಾಗಿದ್ದರೆ, ಅವರ ಪತ್ನಿ ಪಾರ್ವತಿ ಎ.2 ಆರೋಪಿಯಾಗಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News