ಮೈಸೂರು | ಮುಡಾದ 6 ಅಧಿಕಾರಿಗಳಿಗೆ ಈ.ಡಿ ಸಮನ್ಸ್ ಜಾರಿ ; ವಿಚಾರಣೆಗೆ ಹಾಜರಾಗುವಂತೆ ಸೂಚನೆ

Update: 2024-10-25 14:49 GMT

ಸಾಂದರ್ಭಿಕ ಚಿತ್ರ

ಮೈಸೂರು : ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ ದಲ್ಲಿ ನಡೆದಿದೆ ಎನ್ನಲಾಗಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೆಶನಾಲಯ (ಈ.ಡಿ) ಅಧಿಕಾರಿಗಳು ಮುಡಾದ ಆರು ಮಂದಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಸಮನ್ಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

6 ಮಂದಿಗೂ ಬೇರೆ ಬೇರೆ ದಿನಾಂಕಗಳನ್ನು ನೀಡಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು, ಬೆಂಗಳೂರಿನ ಈ.ಡಿ ವಲಯ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಮನ್ಸ್ ಪಡೆದ 6 ಮಂದಿ ನೌಕರರು ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ತಮ್ಮೊಂದಿಗೆ ತರುವಂತೆ ಸೂಚಿಸಿದ್ದಾರೆಂದು ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News