ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಕುಸ್ತಿ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ

Update: 2024-09-22 17:54 GMT

ಮೈಸೂರು: ದಸರಾ ಗೆ ಮಾತ್ರ ಕುಸ್ತಿ ಪಂದ್ಯಾವಳಿ ಸೀಮಿತಗೊಳ್ಳದೆ ರಾಷ್ಟ್ರಮಟ್ಟಕ್ಕೂ ಕೊಂಡೊಯ್ಯುವ ಕೆಲಸವನ್ನು ಮಾಡಬೇಕಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ತಿಳಿಸಿದರು.

ನಗರದ ದೊಡ್ಡಕೆರೆ ಮೈದಾನದ ವಸ್ತು ಪ್ರದರ್ಶನದ ಆವರಣದಲ್ಲಿರುವ ಡಿ.ದೇವರಾಜ ಅರಸು ಕ್ರೀಡಾಂಗಣದಲ್ಲಿ ರವಿವಾರ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ನಾಡಕುಸ್ತಿ ಪಂದ್ಯಾವಳಿಗೆ ಪೈಲ್ವಾನರ ಜೋಡಿಕಟ್ಟುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಅವರು ಮಾತನಾಡಿದರು.

ಅಂದಿನ ಮೈಸೂರು ಮಹರಾಜರು ಕುಸ್ತಿಗೆ ಹೆಚ್ಚಿನ ಒತ್ತು ನೀಡಿದ್ದರಿಂದ ಇಲ್ಲಿನ‌ ಕುಸ್ತಿ ಪಟುಗಳು ರಾಜ್ಯ ದೇಶದಲ್ಲೇ ಪರಿಣಿತಿ ಹೊಂದುವಂತೆ ಮಾಡಿದ್ದರು. ಹಾಗಾಗಿ ಮೈಸೂರಿನ‌ ಕುಸ್ತಿ ಪೈಲ್ವಾನರಾದ ಪೈಲ್ವಾನ್ ರುದ್ರ, ಮೂಗ, ಬಾಲಾಜಿ, ನಂಜನಗೂಡು ನಂಜಯ್ಯ, ಜಿಂದಾಲ್ ರಿಯಾಝ್ ಸೇರಿದಂತೆ ಅನೇಕರು ಪ್ರಸಿದ್ಧಿಗೊಂಡಿದ್ದರು ಎಂದು ಹೇಳಿದರು.

ಈ ಹಿಂದೆ ಕುಸ್ತಿಗಳು ಎಂದರೆ ಜನ ಮುಗಿಬಿದ್ದು ನೋಡುತ್ತಿದ್ದರು.‌ನಾನು ಸಹ ಹಲಾವರು ಕುಸ್ತಿಗಳನ್ನು ನೋಡಿ ಆನಂದಿಸಿದ್ದೇನೆ. ಈಗ ಕುಸ್ತಿ ಕ್ರೀಡೆ ಕಡಿಮೆಯಾಗುತ್ತಿದೆ.‌ ಹಾಗಾಗಿ ದಸರ ಮುಗಿದ ನಂತರ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕುಸ್ತಿ ಕ್ರೀಡೆ ಅಭಿವೃದ್ಧಿಪಡಿಸಲು ಕ್ರಮ ವಹಿಸುತ್ತೇನೆ ಎಂದು ಹೇಳಿದರು.

ಕ್ರೀಡೆ ಜನರನ್ನು ಒಟ್ಟಿಗೆ ಕೊಂಡೊಯ್ಯುವಂತೆ ಮಾಡುತ್ತದೆ. ಕುಸ್ತಿ ಕ್ರೀಡೆಯನ್ನು ಉಳಿಸಿ ಬೆಳೆಸಿ ರಾಷ್ಟ್ರಮಟ್ಟಕ್ಕೆ ಕ್ರೀಡಾಪಟುಗಳನ್ನು ಕೊಂಡೊಯ್ಯುವಂತೆ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಎಸ್ಪಿ, ಡಿಸಿಪಿಗಳಾದ ಮುತ್ತುರಾಜ್, ಜಾಹ್ನವಿ, ಡಿವೈಎಸ್ಪಿ ರಘು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News