ಬಾಂಗ್ಲಾದೇಶ ವಿರುದ್ಧ ಎರಡನೇ ಟಿ20 ಪಂದ್ಯ | ದಿಲ್ಲಿಗೆ ಆಗಮಿಸಿದ ಟೀಮ್ ಇಂಡಿಯಾ

Update: 2024-10-07 16:31 GMT

PC :PTI

ಹೊಸದಿಲ್ಲಿ : ಬಾಂಗ್ಲಾದೇಶ ವಿರುದ್ಧ ಎರಡನೇ ಟಿ20 ಅಂತರ್‌ರಾಷ್ಟ್ರೀಯ ಪಂದ್ಯಕ್ಕಿಂತ ಮೊದಲು ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾವು ಸೋಮವಾರ ಹೊಸದಿಲ್ಲಿಯ ಇಂದಿರಾ ಗಾಂಧಿ ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಸದ್ಯ 3 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆಯಲ್ಲಿರುವ ಟೀಮ್ ಇಂಡಿಯಾ ಸದಸ್ಯರನ್ನು ಅಭಿಮಾನಿಗಳು ದಿಲ್ಲಿ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.

ರಾಷ್ಟ್ರ ರಾಜಧಾನಿಗೆ ಆಗಮಿಸಿದ ಭಾರತೀಯ ಕ್ರಿಕೆಟ್ ತಂಡವು ಬಸ್ಸನ್ನು ಏರಿ ಹೊಟೇಲ್‌ಗೆ ತಲುಪಿತು.

ಬುಧವಾರ ನಡೆದ ಗರಿಷ್ಠ ಮೊತ್ತದ ಪಂದ್ಯದಲ್ಲಿ ಜಯ ಸಾಧಿಸಿರುವ ಆತಿಥೇಯರು ಬುಧವಾರ ಸತತ ಎರಡನೇ ಪಂದ್ಯವನ್ನು ಜಯಿಸಿ 3 ಪಂದ್ಯಗಳ ಸರಣಿಯಲ್ಲಿ ಮುನ್ನಡೆ ಸಾಧಿಸುವತ್ತ ಚಿತ್ತಹರಿಸಿದ್ದಾರೆ.

ಗ್ವಾಲಿಯರ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳ ಅಂತರದಿಂದ ಸೋಲಿಸಿರುವ ಭಾರತ ಕ್ರಿಕೆಟ್ ತಂಡವು ಈಗಾಗಲೇ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News