ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Update: 2024-01-04 15:42 GMT

ಸಿದ್ದರಾಮಯ್ಯ , ಸಚಿನ್ ತೆಂಡುಲ್ಕರ್ | Photo: X \ @siddaramaiah

ಹೊಸದಿಲ್ಲಿ : ದಿಲ್ಲಿ ಇಂದಿರಾಗಾಂಧಿ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಅವರನ್ನು ಭೇಟಿಯಾಗಿ ಉಭಯ ಕುಶಲೋಪರಿ ವಿಚಾರಿಸಿಕೊಂಡರು.

ಕೇಂದ್ರದ ಮಾಜಿ ಹಣಕಾಸು ಸಚಿವರಾದ ಪಿ.ಚಿದಂಬರಂ ಅವರ ಅಧ್ಯಕ್ಷತೆಯಲ್ಲಿ ಎಐಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣಾ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳಲು ಸಿಎಂ ಸಿದ್ದರಾಮಯ್ಯ ದಿಲ್ಲಿಗೆ ಆಗಮಿಸಿದ್ದರು.

ಬೆಂಗಳೂರಿಗೆ ವಾಪಾಸಾಗುವ ವೇಳೆ ವಿಮಾನ ನಿಲ್ದಾಣದಲ್ಲಿ ಸಚಿನ್ – ಸಿದ್ದರಾಮಯ್ಯ ಎದುರುಗೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ತಮ್ಮ ʼxʼ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ ಅವರು, “ಜಾಗತಿಕ ಕ್ರಿಕೆಟ್ನ ದಂತಕಥೆ, ಲಿಟ್ಲ್ ಮಾಸ್ಟರ್ ಸಚಿನ್ ತೆಂಡೂಲ್ಕರ್ ಅವರು ಇಂದು ದೆಹಲಿಯ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ಎದುರಾದ ವೇಳೆ ಕುಶಲೋಪರಿ ವಿಚಾರಿಸಿ, ಪ್ರೀತಿಯಿಂದ ಬೀಳ್ಕೊಟ್ಟೆ. ಸಚಿನ್ ತೆಂಡೂಲ್ಕರ್ ನನ್ನ ಅಚ್ಚುಮೆಚ್ಚಿನ ಆಟಗಾರ, ದಶಕಗಳ ಕಾಲ ತೆಂಡೂಲ್ಕರ್ ಅವರ ಆಟವನ್ನು ಆಸ್ವಾದಿಸಿದ್ದೇನೆ” ಎಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News